13
July, 2025

A News 365Times Venture

13
Sunday
July, 2025

A News 365Times Venture

ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿ ನಮ್ಮ ರಾಜ್ಯದ ಹೆಮ್ಮೆಯ ವಿಷಯ- CS ಶಾಲಿನಿ ರಜನೀಶ್

Date:

ಮೈಸೂರು,ಮೇ 9,2025 (www.justkannada.in): ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಿಂದ ಪ್ರತಿ ವರ್ಷ ಸರಾಸರಿ 280 ತರಬೇತಿ ಕಾರ್ಯಕ್ರಮಗಳ ಮೂಲಕ ಸುಮಾರು 8400 ಗ್ರೂಪ್ ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಲಾಗುತ್ತಿದ್ದು, ನಮ್ಮ ರಾಜ್ಯದ ಉತ್ತಮ ಆಡಳಿತದ ಬಗ್ಗೆ ತಿಳಿದು ಕೊಳ್ಳಲು ಬರುವ ಇತರೆ ರಾಜ್ಯಗಳ ಅಧಿಕಾರಿಗಳಿಗೆ ನಮ್ಮ ಸಂಸ್ಥೆ ವತಿಯಿಂದ ತರಬೇತಿ ನೀಡುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯ ವಿಷಯವಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಧೆಯ ಮಹಾ ನಿರ್ದೇಶಕರಾದ ಶಾಲಿನಿ ರಜನೀಶ್ ಅವರು ಹೇಳಿದರು.

2024 ನೇ ಬ್ಯಾಚ್ ನ ತ್ರಿಪುರ ರಾಜ್ಯದ ಆಡಳಿತ ಸೇವೆಗೆ ಸೇರಿದ ʼಎʼ ವೃಂದದ ಒಟ್ಟು 30 ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೇ 09 ರಿಂದ ಮೇ 12 ರವರೆಗೆ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯಕ್ರಮವನ್ನು ಇಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಉತ್ತಮ ಆಡಳಿತ (good governance) ಹಾಗೂ ನಾಗರೀಕ ಸ್ನೇಹಿ(citizen centric e-governance initiatives) ಯೋಜನೆಗಳಾದʼಭೂಮಿʼ, ʼಮೋಜಿಣಿʼ,ʼಸೇವಾಸಿಂಧುʼ, ʼಏಕೀಕೃತ ಭೂ ನಿರ್ವಹಣಾ ವ್ಯವಸ್ಥೆʼ (ULMS), ʼಕೂಸಿನ ಮನೆʼಇತ್ಯಾದಿ ಯಶಸ್ವಿ ಯೋಜನೆಗಳ ಕುರಿತು ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದರೊಂದಿಗೆ ಪ್ರಶಿಕ್ಷಣಾರ್ಥಿಗಳು ಮೈಸೂರಿನ ಪಾರಂಪರಿಕ ಸ್ಥಳಗಳು, ಚಾಮರಾಜನಗರ ಜಿಲ್ಲೆಯ ನಿಟ್ರೆ ಗ್ರಾಮ ಪಂಚಾಯತಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬoಧಿಸಿದoತೆ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ (ಆಡಳಿತ), ರೂಪಶ್ರೀ ಕೆ, ಜಂಟಿ ನಿರ್ದೇಶಕರಾದ (ತರಬೇತಿ) ಸಾಧನ ಅಶೋಕ್ ಪೋಟೆ, ಹಾಗೂ ತರಬೇತಿ ನಿರ್ದೇಶಕರಾದ ಡಾ. ಕವಿತ ಎಂ.ಆರ್ ಮತ್ತು ಸಂಸ್ಥೆಯ ಎಲ್ಲಾ ಬೋಧಕರು ಉಪಸ್ಥಿತರಿದ್ದರು.

Key words: ʼAʼ and ʼBʼ Officers, High Level, Training , proud thing, CS,  Shalini Rajneesh

The post ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿ ನಮ್ಮ ರಾಜ್ಯದ ಹೆಮ್ಮೆಯ ವಿಷಯ- CS ಶಾಲಿನಿ ರಜನೀಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...