8
July, 2025

A News 365Times Venture

8
Tuesday
July, 2025

A News 365Times Venture

ಅತ್ಯಾಚಾರ ಆರೋಪ ಕೇಸ್: ಜೈಲಿನಿಂದ ಮಡೆನೂರು ಮನು ರಿಲೀಸ್

Date:

ಬೆಂಗಳೂರು,ಜೂನ್,7,2025 (www.justkannada.in): ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ  ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ವಿನ್ನರ್‌ ಮಡೆನೂರು ಮನುಗೆ ಜಾಮೀನು ಸಿಕ್ಕದ್ದು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಮಡೆನೂರು ಮನು ರಿಲೀಸ್‌ ಆಗಿದ್ದಾರೆ.  ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಡೆನೂರು ಮನು, ನಿಜ ಹೇಳಬೇಕು ಅಂದ್ರೆ ಒಂದು ರೀತಿ ಸ್ಮಶಾನ, ಬೂದಿಲಿ ಮೂಳೆಯೂ ಸಿಗಬಾರದು ಅನ್ನೋ ಪರಿಸ್ಥಿತಿಯಲ್ಲಿದ್ದೇನೆ. ಈ ಪರಿಸ್ಥಿತಿ ಯಾವ ಶತ್ರುಗಳಿಗೂ ಬರಬಾರದು. ನಾನು ಯಾರಿಗೂ ಕೇಡು ಬಯಸುವುದಿಲ್ಲ, ನಾನು ಯಾರ ಸಹವಾಸಕ್ಕೂ ಹೋದವನಲ್ಲ. ನಾನಾಯ್ತು, ನನ್ನ ಕೆಲಸ ಆಯ್ತು ಎಂದು ಇದ್ದೆ. ಆದರೆ, 32 ವರ್ಷಕ್ಕೆ ಒಂದೊಳ್ಳೆ ಬುದ್ಧಿ ಕಲಿಸಿದ್ದಾರೆ ಎಂದಿದ್ದಾರೆ.

ನನ್ನನ್ನು ಯಾರೆಲ್ಲ ಬೈದಿದ್ದಾರೋ ಅವರೆಲ್ಲರೂ ನಮ್ಮ ಕರ್ನಾಟಕದವರೇ, ತಂದೆ ತಾಯಿ ಸ್ಥಾನದಲ್ಲಿ ನಿಂತು ಬುದ್ಧಿ ಹೇಳಿದ್ದಾರೆ. ನನ್ನ ಮೇಲೆ  ದೂರು ಕೊಟ್ಟವರು ಯಾರು? ಯಾರು ದೂರು ಕೊಡಿಸಿದರು? ಎನ್ನುವುದು ಗೊತ್ತಿಲ್ಲ. ಈಗ ಈ ಕೇಸ್‌ ವಿಚಾರಣೆ ನಡೆಯುತ್ತಿದೆ. ಇನ್ನೇನು ಚಾರ್ಜ್‌ಶೀಟ್‌  ಕೂಡ ಹಾಕುತ್ತಾರೆ. ಕೋರ್ಟ್‌ ಏನು ಹೇಳುತ್ತದೆಯೋ ಅದಕ್ಕೆ ನಾನು ತಲೆಬಾಗುತ್ತೇನೆ ಎಂದಿದ್ದಾರೆ.vtu

Key words: Rape case, Madenuru Manu, released, jail

The post ಅತ್ಯಾಚಾರ ಆರೋಪ ಕೇಸ್: ಜೈಲಿನಿಂದ ಮಡೆನೂರು ಮನು ರಿಲೀಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...