12
December, 2025

A News 365Times Venture

12
Friday
December, 2025

A News 365Times Venture

ಆಷಾಢ ಮಾಸ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ, ಪೂಜೆ ಹೋಮ ಹವನ- ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್

Date:

ಮೈಸೂರು,ಜೂನ್,25,2025 (www.justkannada.in): ಆಷಾಢ ಮಾಸ ವಿಶೇಷವಾದ ಮಾಸವಾಗಿದ್ದು ನಾಲ್ಕು ಶುಕ್ರವಾರದಲ್ಲೂ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ, ಪೂಜೆ ಹೋಮ ಹವನ ನೆರವೇರಿಸಲಾಗುತ್ತದೆ ಎಂದು ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿ ಮಾಹಿತಿ ನೀಡಿದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್, ಆಷಾಢ ಮಾಸದಲ್ಲಿ ಸಾಮಾನ್ಯವಾಗಿ ಶಕ್ತಿ ದೇವತೆಗಳ ಆರಾಧನೆ ಹೆಚ್ಚು ಇರುತ್ತದೆ. ಮೈಸೂರಿನಲ್ಲಿ ಹಲವು ಶಕ್ತಿ ದೇವತೆಗಳಾರಾಧನೆ ನಡೆಯುತ್ತದೆ. ತ್ರಿನೇಶ್ವರಿ,ತ್ರಿಪುರ ಸುಂದರಿ, ಕಾಮ ಕಾಮೇಶ್ವರಿ ದೇವಾಲಯಗಳು ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ  ಹೋಮ ಹವನ ನಡೆಯುತ್ತದೆ. ಅದರಂತೆ ಚಾಮುಂಡಿ ಬೆಟ್ಟದಲ್ಲೂ ಆಷಾಡ ಮಾಸದ ನಾಲ್ಕು ಶುಕ್ರವಾರ ದೇವಿಗೆ ವಿಶೇಷ ಅಭಿಷೇಕ,ಪೂಜೆ,ಹೋಮ,ಹವನಗಳು ನಡೆಯುತ್ತವೆ ಎಂದು ತಿಳಿಸಿದರು.

ಮುಂಜಾನೆ 3:30 ಕ್ಕೆ ಪೂಜಾ ಕೈಂಕರ್ಯಗಳು ಆರಂಭವಾಗುತ್ತವೆ. ನಾಲ್ಕು ವಾರ ತಾಯಿ ಚಾಮುಂಡೇಶ್ವರಿ ಅಮ್ಮನವರು ಲಕ್ಷ್ಮಿ ಅಲಂಕಾರದಲ್ಲಿರುತ್ತಾರೆ. ಜುಲೈ17 ಕ್ಕೆ ಅಮ್ಮನವರ ವರ್ದಂತಿ ಮಹೋತ್ಸವ ಜರುಗಲಿದ್ದು, ವರ್ಧಂತಿ ದಿನದಂದು ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೂ ದರ್ಶನಕ್ಕೆ ಅವಕಾಶ ಇರುತ್ತದೆ. ಪ್ರತಿ ಶುಕ್ರವಾರ ಮುಂಜಾನೆ 3:30 ಕ್ಕೆ ಪೂಜೆ ಆರಂಭವಾಗುತ್ತದೆ. ನಾಲ್ಕೂ ವಾರವೂ ತಾಯಿ ಜಗನ್ಮಾತೆ ಲಕ್ಷ್ಮಿ ಅಲಂಕಾರದಲ್ಲಿ ಇರಿತ್ತಾಳೆ ಎಂದು ಶಶಿ ಶೇಖರ್ ದೀಕ್ಷಿತ್ ತಿಳಿಸಿದರು.vtu

Key words: Ashadha, Chamundi Hills , Chief Priest,  Sasishekhar Dixit

The post ಆಷಾಢ ಮಾಸ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ, ಪೂಜೆ ಹೋಮ ಹವನ- ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...