10
July, 2025

A News 365Times Venture

10
Thursday
July, 2025

A News 365Times Venture

ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ: ಕಂಬಳ ಸೇರಿಸಲು ಚಿಂತನೆ- ಡಿಸಿಎಂ ಡಿಕೆ ಶಿವಕುಮಾರ್

Date:

ಮೈಸೂರು ,ಏಪ್ರಿಲ್,25,2025 (www.justkannada.in): ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು.

ಟೌನ್ ಶಿಪ್  ಪಿತಾಮಹ  ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ

ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ  7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್  ಪಿತಾಮಹ  ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ  ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟರು.

ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ  ಮಾಡಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ರಾಮನಗರ ಹೆಸರು ಬದಲಾವಣೆ ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು

ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಸವಾಲೆಸೆದರು. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ‌ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ..? ಏನು ಅಂತ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಟಾಂಗ್ ಕೊಟ್ಟರು.

Key words: Some changes, mysore dasara, adding, Kambala, DCM, DK Shivakumar

The post ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ: ಕಂಬಳ ಸೇರಿಸಲು ಚಿಂತನೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು...

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ...

JDS ತೊರೆದು ಕಾಂಗ್ರೆಸ್ ಸೇರ್ತಾರಾ ಶಾಸಕ ಜಿ.ಟಿ ದೇವೇಗೌಡ..?  ಈ ಬಗ್ಗೆ ಸ್ವತಃ ಅವರ ಪ್ರತಿಕ್ರಿಯೆ ಹೀಗಿತ್ತು..!

ಮೈಸೂರು, ಜುಲೈ,9,2025 (www.justkannada.in):  ನಾನು ಜೆಡಿಎಸ್ ನಲ್ಲಿ ಇರಬೇಕಾ ಬೇಡವಾ?  ಬಿಜೆಪಿಗೆ...

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ...