14
July, 2025

A News 365Times Venture

14
Monday
July, 2025

A News 365Times Venture

ಈ ಬಾರಿ ನನ್ನ ಜನ್ಮದಿನಾಚಾರಣೆ ಬೇಡ: ಯೋಧರ ಜತೆ ನಿಲ್ಲೋಣ-ಡಿಸಿಎಂ ಡಿಕೆ ಶಿವಕುಮಾರ್ ಮನವಿ

Date:

ಬೆಂಗಳೂರು,ಮೇ,10,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ, ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಈ ಸಂದರ್ಭದಲ್ಲಿ  ನನ್ನ ಜನ್ಮ ದಿನಾಚರಣೆ ಮಾಡುವುದು  ಬೇಡ ಎಂದು ತಮ್ಮ ಅಭಿಮಾನಿಗಳಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಲ್ಲಿ  ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಯೋಧರು ಭಯೋತ್ಪಾದನೆ ವಿರುದ್ಧ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮದಿನದ ಸಂದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದಿದ್ದಾರೆ.

ಹಾಗೆಯೇ ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದು ಜಾಹೀರಾತುಗಳನ್ನು ನೀಡುವುದನ್ನ ಮಾಡಬಾರದು.  ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Key words: Don’t, celebrate, my birthday, DCM DK Shivakumar

The post ಈ ಬಾರಿ ನನ್ನ ಜನ್ಮದಿನಾಚಾರಣೆ ಬೇಡ: ಯೋಧರ ಜತೆ ನಿಲ್ಲೋಣ-ಡಿಸಿಎಂ ಡಿಕೆ ಶಿವಕುಮಾರ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ...

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್...

ನಾಳೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ

ಬೆಂಗಳೂರು,ಜುಲೈ,14,2025 (www.justkannada.in): ವಯೋಸಹಜ ಖಾಯಿಲೆಯಿಂದ ಇಂದು ನಿಧನರಾದ ಬಹುಭಾಷಾ ಹಿರಿಯ ನಟಿ...

ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು

ಮೈಸೂರು,ಜುಲೈ,14,2025 (www.justkannada.in): ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ...