18
July, 2025

A News 365Times Venture

18
Friday
July, 2025

A News 365Times Venture

ಉದಯಗಿರಿ ಕಲ್ಲು ತೂರಾಟ ಕೇಸ್: ಫೆ.24 ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆ

Date:

ಮೈಸೂರು,ಫೆಬ್ರವರಿ,18,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಘಟನೆ ಖಂಡಿಸಿ ಫೆಬ್ರವರಿ 24ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆಯನ್ನ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯು ಆಯೋಜಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಉದಯಗಿರಿ ಗಲಭೆ ಘಟನೆಯನ್ನು ಖಂಡಿಸಿದ ಸಮಿತಿ ಸದಸ್ಯರು, ಈ ಸಂಬಂಧ ಫೆಬ್ರವರಿ 24 ರ ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯ ಆವರಣದಲ್ಲಿ ಬೃಹತ್ ಜನಾಂದೋಲನ ಜಾಗೃತಿ ಸಭೆ ಆಯೋಜನೆ ಮಾಡಿದ್ದಾರೆ

ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಯು ನಮ್ಮ ದೇಶದ ಆಂತರಿಕ ಸುರಕ್ಷತೆಗೆ, ಕಾನೂನು ಸುವ್ಯವಸ್ಥೆಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಅಲ್ಲಿ ನಡೆದ ಘಟನೆಯು ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ. ಜೆ ಹಳ್ಳಿ ಘಟನೆಗೆ ಸಮಾನವಾಗಿದೆ. ಈ ಗಲಭೆಯು ಹಿಂದೆ ನಿಷೇಧಿತ ಪಿಎಫ್ ಐ ಸಂಘಟನೆಯ ಕೈವಾಡ ಇರುವ ಅನುಮಾನವಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮೌಲ್ವಿಯು ಪಿಎಫ್ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್ ಡಿಪಿಐ ಕಾರ್ಯಕರ್ತನಾಗಿದ್ದಾನೆ ಎಂದು  ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿ ಸಂಚಾಲಕರು ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ ಬಂಧಿತ ಆರೋಪಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸ್ ದಾಖಲಿಸಿ ಎನ್ ಐಎ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Key words: Udayagiri, stone pelting, case, e public awareness, meeting, Feb. 24

The post ಉದಯಗಿರಿ ಕಲ್ಲು ತೂರಾಟ ಕೇಸ್: ಫೆ.24 ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...