16
March, 2026

A News 365Times Venture

16
Monday
March, 2026

A News 365Times Venture

ಎಎಸ್ಪಿ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ದುರಹಂಕಾರವೋ –ಸಿಎಂ ವಿರುದ್ದಆರ್.ಅಶೋಕ್ ವಾಗ್ದಾಳಿ

Date:

ಬೆಂಗಳೂರು,ಜುಲೈ,3,2025 (www.justkannada.in):  ಸಮಾವೇಶದ ವೇಳೆ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್ ಪಿ ನಾರಾಯಣ ಭರಮನಿ ಅವರು ರಾಜೀನಾಮೆಗೆ ಮುಂದಾಗಿದ್ದು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ! ಸಿಎಂ ಸಿದ್ದರಾಮಯ್ಯನವರೇ, ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನ ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ

ಆದರೆ ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಕಿಡಿಕಾರಿದ್ದಾರೆ.

ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಆರ್.ಅಶೋಕ್ ತಿಳಿಸಿದ್ದಾರೆ.vtu

Key words: ASP, CM Siddaramaiah, arrogance, R. Ashok

The post ಎಎಸ್ಪಿ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ದುರಹಂಕಾರವೋ –ಸಿಎಂ ವಿರುದ್ದಆರ್.ಅಶೋಕ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...