8
July, 2025

A News 365Times Venture

8
Tuesday
July, 2025

A News 365Times Venture

ಎಸ್ ಸಿ ಒಳಮೀಸಲಾತಿ: ರಾಜ್ಯದಲ್ಲಿ ಇಂದಿನಿಂದ ಸಮೀಕ್ಷೆ ಆರಂಭ

Date:

ಬೆಂಗಳೂರು,ಮೇ,5,2025 (www.justkannada.in):  ಇಂದಿನಿಂದ ಪರಿಶಿಷ್ಟ ಜಾತಿ ಸಮುದಾಯದ ಉಪ ಜಾತಿಗಳ ಪ್ರತ್ಯೇಕ ಗಣತಿ ಆರಂಭವಾಗಲಿದ್ದು, ಮೇ 23 ರವರೆಗೆ ರಾಜ್ಯಾದ್ಯಂತ ಗಣತಿ ಕಾರ್ಯ ನಡೆಯಲಿದೆ.

2024 ರ ಆಗಸ್ಟ್ 1 ರಂದು ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿ ಜಾರಿ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಗಸ್ಟ್ 12 ರಂದು ರಾಜ್ಯ ಸರ್ಕಾರ ನಾಗಮೋಹನ್ ದಾಸ್ ಆಯೋಗ ರಚನೆ ಮಾಡಿತ್ತು.  ನಿವೃತ್ತ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್  ನೇತೃತ್ವದ ಏಕ ಸದಸ್ಯ ಆಯೋಗ ರಚನೆ ಮಾಡಿದ್ದು ಇಂದಿನಿಂದ ಸಮೀಕ್ಷೆ ಆರಂಭವಾಗಿದೆ.

ಒಳ ಮೀಸಲಾತಿ ಜಾರಿಗಾಗಿ ದಲಿತ ಸಮುದಾಯಗಳು ದಶಕಗಳಿಂದ ಆಗ್ರಹಿಸುತ್ತಿದ್ದು, ಪರಿಶಿಷ್ಟ ಜಾತಿಯ ಅತೀ ಹಿಂದುಳಿದ ಉಪ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಬಹುದಿನಗಳ ಬೇಡಿಕೆ ಈಡೇರುವ ಕ್ಷಣ  ಸನಿಹ ಬಂದಿದೆ.

ಜಸ್ಟೀಸ್ ನಾಗಮೋಹನ್ ದಾಸ್ ನೇತೃತ್ವದ ಆಯೋಗ  ಸಮೀಕ್ಷೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸಲು ಸಮಯ ಅವಕಾಶ ಕೇಳಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳಿವೆ. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂದು ದಕ್ಷಿಣ ಭಾರತದಲ್ಲಿ ಕರೆಯಲಾಗುತ್ತದೆ. ಅಲ್ಲಿನ‌ ಉಪ ಜಾತಿಗಳ ಗೊಂದಲ ಸರಿಪಡಿಸಲು ಸರ್ಕಾರ ಮುಂದಾಗಿದ್ದು, ದಾಖಲೆ ಪುರಾವೆ, ಅಂತರ್ ಹಿಂದುಳಿದಿರುವಿಕೆ ಇನ್ನಿತರ ಮಾಹಿತಿ ಸಂಗ್ರಹಿಸಿ ವೈಜ್ಞಾನಿಕ ಮಾಹಿತಿ ಸಂಗ್ರಹ ಮಾಡಬೇಕಿದೆ.

ಈ ನಡುವ ಆಯೋಗಕ್ಕೆ ಎರಡು ತಿಂಗಳಲ್ಲಿ ವರದಿ ನೀಡಲು ಸರ್ಕಾರ ಸೂಚಿಸಿತ್ತು. ಆದರೆ ಇದೀಗ ಆಯೋಗ ಆರು ತಿಂಗಳ ಸಮಯಾವಕಾಶ ಕೇಳಿದ್ದು, ರಾಜ್ಯಾದ್ಯಂತ  ಸಮೀಕ್ಷೆಗಾಗಿ 58,960 ಗಣತಿದಾರರನ್ನು ನೇಮಕ ಮಾಡಲಾಗಿದೆ. ಗಣತಿದಾರರು ಮನೆ ಮನೆಗೆ ತೆರಳಿ ಖುದ್ದಾಗಿ ಸಮೀಕ್ಷೆ ನಡೆಸಲಿದ್ದು, ಸುಮಾರು 6000 ಸುಪರ್ವೈಸರ್ ಗಳ ನಿಯೋಜನೆ ಮಾಡಲಾಗಿದೆ  ಈಗಾಗಲೇ ಗಣತಿದಾರರಿಗೆ ಸೂಕ್ತ ತರಬೇತಿ ನೀಡಲಾಗಿದೆ.

ಮೇ.5 ರಿಂದ 23 ರವರಗೆ ಸಮೀಕ್ಷೆ ನಡೆಯಲಿದ್ದು ಮೆ.19 ರಿಂದ 21 ರವರೆಗೆ ಪಂಚಾಯತಿ ಮಟ್ಟದಲ್ಲಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ಮೇ 19 ರಿಂದ 23 ರವರೆಗೆ ಆನ್ ಲೈನ್ ಮೂಲಕವೂ ಘೋಷಣೆ ಮಾಡಲು ಅವಕಾಶ ನೀಡಲಾಗಿದೆ.

Key words: SC, internal reservation, Survey, state

 

The post ಎಸ್ ಸಿ ಒಳಮೀಸಲಾತಿ: ರಾಜ್ಯದಲ್ಲಿ ಇಂದಿನಿಂದ ಸಮೀಕ್ಷೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...