11
March, 2026

A News 365Times Venture

11
Wednesday
March, 2026

A News 365Times Venture

ಏ.8 ರಿಂದ 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ

Date:

ತುಮಕೂರು,ಏಪ್ರಿಲ್,4,2025 (www.justkannada.in): ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ ,ಹಾಲನೂರು ಗ್ರಾಮದ ಯಜಮಾನರು, ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ.

ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12-45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮಿ ದೇವಿ ಮೆರವಣಿಗೆ ನೆರವೇರಲಿದೆ. ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ.

ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು ,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ ಪ್ರದರ್ಶನವಾಗಲಿದೆ. ಏ.13 ರಂದು ರುದ್ರಾಕ್ಷಿ ಮಂಟಪ ಮೆರವಣಿಗೆ ಏ.16 ರಂದು ವಸಂತೋತ್ಸವ ಓಕುಳಿ ಆಚರಣೆ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರೆ ನಡೆಯುವ 9 ದಿನವೂ ನಿರಂತರವಾಗಿ ಅನ್ನ ದಾಸೋಹ ನಡೆಯಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ನಡೆಯುವ ಸದರಿ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಇರುತ್ತದೆ.

ರಥ ಬೀದಿಯಲ್ಲಿ ನೂರಾರು ಅಂಗಡಿ ಮುಂಗಟ್ಟು ತೆರೆದು ಕೊಳ್ಳಲಿವೆ. ಸಹಸ್ರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಹರಕೆ ಮಾಡಿಕೊಂಡವರು ಹಾಗೂ ಹರಕೆ ಮಾಡಿಕೊಳ್ಳುವವರು ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಲಿದ್ದಾರೆ. ಸಂತಾನ, ಆರೋಗ್ಯ,ವಿದ್ಯೆ, ಲಗ್ನ ಇತ್ಯಾದಿಗಳ ಈಡೇರಿಕೆಗೆ ಭಕ್ತರು ಹರಕೆ ಹೊತ್ತಿರುತ್ತಾರೆ. ಹರಕೆ ಈಡೇರಿದ ಮೇಲೆ ಹರಕೆ ತೀರಿಸುತ್ತಾರೆ. ಹಾಗೆಯೇ ಜಾತ್ರೆಗೆ ಬರುವ ಭಕ್ತಾದಿಗಳು ಹಾಲನೂರು ಸುತ್ತಮುತ್ತಲಿನ  ಪುರಾಣ ಪ್ರಸಿದ್ಧ ದೇವಾಲಯಗಳಾದ ಅರೆಯೂರು ವೈದ್ಯನಾಥೇಶ್ವರ,ಕೈದಾಳ ಚನ್ನಕೇಶವ,ಗೂಳೂರು ಗಣೇಶ, ಹೆತ್ತೇನಹಳ್ಳಿ ಮಾರಮ್ಮನ ಶ್ರೀ ಕ್ಷೇತ್ರಗಳಿಗೆ ಭೇಟಿ ನೀಡಬಹುದಾಗಿದೆ.

Key words: Halanur Sri Malleshwara Swamy, Parvata Devi, Fair , 8th April

The post ಏ.8 ರಿಂದ 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...