12
July, 2025

A News 365Times Venture

12
Saturday
July, 2025

A News 365Times Venture

ಐದು ಹುಲಿಗಳ ಸಾವು ಕೇಸ್ ಗಂಭೀರವಾಗಿ ಪರಿಗಣನೆ: ಮೂರು ದಿನಗಳಲ್ಲಿ ವರದಿ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಜೂನ್,27,2025 (www.justkannada.in):  ಮಲೇ ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರಕರಣವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಗೆ ತಂಡ ರಚಿಸಿದ್ದು ಮೂರು ದಿನಗಳಲ್ಲಿ ವರದಿ ಬರಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಐದು ಹುಲಿಗಳ ಸಾವು ಅತ್ಯಂತ ದುಃಖಕರ ಘಟನೆಯಾಗಿದೆ.  ಹುಲಿಗಳ ಸಾವಿನ ಬಗ್ಗೆ ತನಿಖೆಗೆ ಈಗಾಗಲೇ ತಂಡ ರಚಿಸಿದ್ದೇವೆ. ಇನ್ನೂ ಮೂರು ದಿನಗಳಲ್ಲಿ ವರದಿ ಬರಲಿದೆ. ಪ್ರಾಥಮಿಕ ಹಂತದಲ್ಲಿ ಗೊತ್ತಾಗಿರುವಂತೆ ವಿಷಪ್ರಾಸನ ಆಗಿರಬಹುದು.  ಸತ್ತ ಹೋದ ಹಸು ಮೇಲೆ  ಮೇಲೆ ಯಾರೋ ವಿಷ ಹಾಕಿರಬಹುದು ಅದನ್ನ ಹುಲಿಗಳು ತಿಂದು ಮೃತಪಟ್ಟಿರಬಹುದು ಎಂದರು.

ಹುಲಿಗಳ ಸಾವು ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.  ಈ ವಿಚಾರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಹುಲಿ ಸಂರಕ್ಷಣೆಗೆ ಕೇಂದ್ರ ಸಹ ಅನುದಾನ ಬಿಡುಗಡೆ ಮಾಡಬೇಕು. ಸಿಎಂ ಜೊತೆ ಚರ್ಚೆ ಮಾಡಿದ್ದೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.vtu

Key words: Five Tigers, Death Case, Serious, Minister, Ishwar Khandre

The post ಐದು ಹುಲಿಗಳ ಸಾವು ಕೇಸ್ ಗಂಭೀರವಾಗಿ ಪರಿಗಣನೆ: ಮೂರು ದಿನಗಳಲ್ಲಿ ವರದಿ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...