17
November, 2025

A News 365Times Venture

17
Monday
November, 2025

A News 365Times Venture

ಐಸ್ ಕ್ರೀಮ್ ತಯಾರಿಕಾ ಘಟಕಗಳ ಮೇಲೆ ದಾಳಿ: ನೋಟಿಸ್ ನೀಡಿ ದಂಡ ವಿಧಿಸಿದ ಅಧಿಕಾರಿಗಳು

Date:

ಮೈಸೂರು,ಮಾರ್ಚ್,31,2025 (www.justkannada.in): ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ವಿವಿಧೆಡೆ ಐಸ್ ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲಿಸಿ ನೋಟಿಸ್ ಜಾರಿ ಮಾಡಿ ದಂಡ ವಿಧಿಸಿದರು.

ಆಹಾರ ಸುರಕ್ಷತಾ ಅಧಿಕಾರಿಗಳಾದ ಡಾ. ರವಿಕುಮಾರ್ ನೇತೃತ್ವದಲ್ಲಿ ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿರುವ ಐಸ್ ಕ್ರೀಮ್ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲ‌‌ನೆ ನಡೆಸಿದರು. ಅಧಿಕಾರಿಗಳ ತಂಡವು ಪ್ರತಿಯೊಂದು ಕಂಪನಿಯ ಐಸ್ ಕ್ರೀಮ್ ಗಳನ್ನು ಪರಿಶೀಲನೆ ನಡೆಸಿ ನೋಟಿಸ್ ಜಾರಿ ಮಾಡಿ ದಂಡ ವಿಧಿಸಿದರು.

ಈ ವೇಳೆ ಮಾತನಾಡಿದ ಆಹಾರ ಸುರಕ್ಷತಾಧಿಕಾರಿ ಡಾ. ರವಿಕುಮಾರ್, ಐಸ್ ಕ್ರೀಮ್ ಗಳನ್ನು ತಯಾರಿಸುವಾಗ ಶುದ್ಧವಾದ ನೀರನ್ನು ಉಪಯೋಗಿಸಬೇಕು. ಯಾವುದೇ ರೀತಿಯ ಬಣ್ಣಗಳನ್ನು ಹಾಕಬಾರದು. ಐಸ್ ಕ್ರೀಮ್ ತಯಾರಿಸುವ ಸ್ಥಳಗಳನ್ನು ಸ್ವಚ್ಛತೆಯಿಂದ ‌ ಇಟ್ಟುಕೊಳ್ಳಬೇಕು. ಕಡ್ಡಾಯವಾಗಿ ಫುಡ್ ಲೈಸನ್ಸ್ ಅನ್ನು ಒಂದು ವಾರದೊಳಗೆ ತೆಗೆದುಕೊಳ್ಳಬೇಕು. ಫುಡ್ ಲೈಸೆನ್ಸ್ ಪಡೆಯದೇ ಐಸ್ ಕ್ರೀಮ್ ತಯಾರಿಸಬಾರದು. ತಪ್ಪಿದರೆ ದಂಡ ವಿಧಿಸಲಾಗುತ್ತದೆ ಹಾಗೂ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ನಾಗೇಶ್ ಮತ್ತು ಪ್ರತಾಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Key words: mysore, Raid, ice cream, manufacturing units

The post ಐಸ್ ಕ್ರೀಮ್ ತಯಾರಿಕಾ ಘಟಕಗಳ ಮೇಲೆ ದಾಳಿ: ನೋಟಿಸ್ ನೀಡಿ ದಂಡ ವಿಧಿಸಿದ ಅಧಿಕಾರಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...