17
April, 2026

A News 365Times Venture

17
Friday
April, 2026

A News 365Times Venture

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ  ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಠಾಣಾ ಪೊಲೀಸರು  ವಾಟಾಳ್​ ನಾಗರಾಜ್​ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು  ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  42ನೇ ಎಸಿಜೆಎಂ ನ್ಯಾಯಾಲಯ  ವಾಟಾಳ್​ ನಾಗರಾಜ್​ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.

ಬಂಧನದ ವೇಳೆ  ವಾಟಾಳ್​ ನಾಗರಾಜ್​ ಅವರು ಇಂಗ್ಲಿಷ್‌ ನಲ್ಲಿ ವಾರೆಂಟ್ ತಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕನ್ನಡದಲ್ಲಿ ವಾರೆಂಟ್ ಕೊಟ್ಟರೆ ಮಾತ್ರ ಬರುತ್ತೇನೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಪಟ್ಟು ಹಿಡಿದು  ಪೊಲೀಸ್ ವಾಹನ ಹತ್ತಲು ನಿರಾಕರಿಸಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಆಟೋದಲ್ಲಿ ಕೋರ್ಟ್‌ಗೆ ಕರೆದುದೊಯ್ದರು.

Key words: Kannada activist, Vatal Nagaraj, arrested

The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...