14
July, 2025

A News 365Times Venture

14
Monday
July, 2025

A News 365Times Venture

ಕರ್ನಾಟಕ ‌–ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಆರಂಭ

Date:

ಬೆಳಗಾವಿ, ಫೆಬ್ರವರಿ, 27, 2025 (www.justkannada.in): ಕಂಡಕ್ಟರ್ ಮೇಲೆ ಹಲ್ಲೆ, ಕನ್ನಡ ಮರಾಠಿ ಭಾಷಾ ಗಲಾಟೆಯಿಂದ ಬಂದ್ ಆಗಿದ್ದ ಕರ್ನಾಟಕ ‌–ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ.

ನಾಲ್ಕು ದಿನಗಳ ಬಳಿಕ ಇಂದಿನಿಂದ ಅಂತರರಾಜ್ಯಗಳ‌ ಮಧ್ಯೆ ‌ಬಸ್ ಸಂಚಾರ ಆರಂಭವಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ  ಕಾರ್ಯಕರ್ತರು ಕರ್ನಾಟಕ ಬಸ್ ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿದ್ದರು.  ಇಷ್ಟಕ್ಕೆ ಸುಮ್ಮನಾಗದೇ ಕರ್ನಾಟಕ ಬಸ್ ಚಾಲಕನಿಂದ ಜೈ ಮಹಾರಾಷ್ಟ್ರ ಘೋಷಣೆ ಹಾಕಿಸಿದ್ದರು.  ಇದಕ್ಕೆ ಬೆಳಗಾವಿ ಚಲೋ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿವಸೇನೆ ಕಾರ್ಯಕರ್ತರಿಗೆ ತಕ್ಕ ಉತ್ತರ ಕೊಟ್ಟಿದ್ದರು.

ಈ ಮಧ್ಯೆ ಫೆಬ್ರವರಿ 23 ರಿಂದ ಎರಡು ರಾಜ್ಯಗಳ ನಡುವೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ನಾಲ್ಕು ದಿನ ಬಸ್ ಇಲ್ಲದಕ್ಕೆ ಎರಡು ರಾಜ್ಯದಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದರು. ಅಲ್ಲದೆ  ನಾಲ್ಕು ದಿನದಲ್ಲಿ ಕರ್ನಾಟಕ ಸರ್ಕಾರ ಕೋಟ್ಯಾಂತರ ರೂಪಾಯಿ ಆರ್ಥಿಕ ನಷ್ಟ ಅನುಭವಿಸಿದೆ.

ಈ ನಡುವೆ ಬೆಳಗಾವಿ ಡಿಸಿ ಮತ್ತು ಕೊಲ್ಲಾಪುರ ಡಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಆರಂಭಿಸಲು ಮಾತುಕತೆ ನಡೆಸಿ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯದಲ್ಲಿ ಬಸ್ ಚಾಲಕರ, ನಿರ್ವಾಹಕರ ಮತ್ತು ಪ್ರಯಾಣಿಕರ‌ ಸುರಕ್ಷತೆಗೆ ಒತ್ತು ಕೊಡುವುದಾಗಿ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದರು.

ಇದೀಗ ಎರಡು ರಾಜ್ಯದ ‌ಮಧ್ಯೆ ಹಂತ ಹಂತವಾಗಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಮುಂಬೈ, ಶಿರಡಿ, ನಾಸಿಕ್ ಗೆ  ಬಸ್ ಸೇವೆ ಆರಂಭವಾಗಿದ್ದು, ಮಹಾರಾಷ್ಟ್ರದಿಂದಲೂ ರಾಜ್ಯಕ್ಕೆ ಬಸ್ ಸಂಚರಿಸುತ್ತಿವೆ. ಸದ್ಯ ಕೊಲ್ಲಾಪುರದಿಂದ ಸಂಕೇಶ್ವರವರೆಗೂ ಮಹಾರಾಷ್ಟ್ರ ಬಸ್ ಗಳು ಬರುತ್ತಿದ್ದು, ಇಂದು ಪೂರ್ಣಪ್ರಮಾಣದ ಬಸ್ ಸಂಚಾರ ಆರಂಭಗೊಂಡಿದೆ.

Key words: Bus service, between, Karnataka, Maharashtra, begins

The post ಕರ್ನಾಟಕ ‌–ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...