13
November, 2025

A News 365Times Venture

13
Thursday
November, 2025

A News 365Times Venture

ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

Date:

ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.vtu

Key words: Good news, artists, government, increase

The post ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...