16
April, 2026

A News 365Times Venture

16
Thursday
April, 2026

A News 365Times Venture

ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ

Date:

ಬೆಂಗಳೂರು, ಮೇ, 5,2025 (www.justkannada.in): ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಇದು ಪರಿಶಿಷ್ಟಜಾತಿ ಸಮುದಾಯಕ್ಕೆ ಮಾಡುತ್ತಿರುವ ಸಮೀಕ್ಷೆಯಾಗಿದ್ದು ಕಾಂತರಾಜು ವರದಿಗೂ ಈ ಸಮೀಕ್ಷೆಗೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.​ಸಿ ಮಹದೇವಪ್ಪ, ಎಸ್​ಸಿ ಒಳ ಮೀಸಲಾತಿ ಸಮೀಕ್ಷೆ ಇದೊಂದು ಚಾರಿತ್ರಿಕವಾದದ್ದು. ಪರಿಶಿಷ್ಟ ಜಾತಿ ಅನ್ನೋದು ಜಾತಿ ಅಲ್ಲ, ಅದೊಂದು ಗುಂಪು. ಪರಿಶಿಷ್ಟ ಜಾತಿ ಸಮುದಾಯದ ದತ್ತಾಂಶಗಳ ಸಂಗ್ರಹಕ್ಕಾಗಿ ಸುಪ್ರೀಂಕೋರ್ಟ್​ ನಿರ್ದೇಶನದಂತೆ ಸಮೀಕ್ಷೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ. ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದರು.

ಇದು ಎಸ್.​​ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ. ಯಾರು ಕೂಡ ಸುಳ್ಳು ಹೇಳೋಕೆ‌ ಆಗಲ್ಲ. ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Key words: SC, internal reservation, survey, Minister, H.C. Mahadevappa

The post ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...