4
March, 2026

A News 365Times Venture

4
Wednesday
March, 2026

A News 365Times Venture

ಕಾಲ್ತುಳಿತ ಕೇಸ್: ನ್ಯಾ. ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ

Date:

ಬೆಂಗಳೂರು, ಜುಲೈ,25,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್  ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ  ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಮೈಕೆಲ್ ಕುನ್ಹಾ ವರದಿಯನ್ನು ರದ್ದುಪಡಿಸುವಂತೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆಗೆ ಮನವಿ ಮಾಡಿತು. ಆದರೆ ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ.

ಸರ್ಕಾರ ತನ್ನ ಮುಖ ಉಳಿಸಿಕೊಳ್ಳಲು ಆಯೋಗ ರಚಿಸಿದಂತಿದೆ. ನ್ಯಾ.ಕುನ್ಹಾ ಆಯೋಗದ ವರದಿ ಏಕಪಕ್ಷೀಯವಾಗಿದೆ. ಸಾಕ್ಷಿಗಳ ಪಾಟೀಸವಾಲಿಗೆ ಅವಕಾಶ ನೀಡಲಾಗಿಲ್ಲ. ಅರ್ಜಿದಾರರ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಪೂರ್ವಯೋಜಿತವಾಗಿಯೇ ವರದಿ ಲೀಕ್ ಮಾಡಲಾಗಿದೆ. ಹೀಗಾಗಿ ವರದಿಯನ್ನೇ ರದ್ದುಪಡಿಸಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.vtu

Key words: Stampede case, Petition, High Court, quashing, Justice Cunha’s report

The post ಕಾಲ್ತುಳಿತ ಕೇಸ್: ನ್ಯಾ. ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...