4
May, 2026

A News 365Times Venture

4
Monday
May, 2026

A News 365Times Venture

ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್

Date:

ಬೆಂಗಳೂರು,ಜೂನ್,5,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನ ಜೂನ್ 10ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಈ ಪಿಐಎಲ್ ವಿಚಾರಣೆ ನಡೆದಿದ್ದು, ಸ್ಟೇಡಿಯಂ ನಲ್ಲಿ ಎಷ್ಟು ಗೇಟ್ ಗಳಿವೆ ಎಷ್ಟು ಗೇಟ್ ತೆರೆಯಲಾಗಿತ್ತು ಎಂದು  ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಎಜಿ ಶಶಿಕುಮಾರ್ ಶೆಟ್ಟಿ, 21 ಗೇಟ್ ಓಪನ್ ಮಾಡಲಾಗಿತ್ತು ಸರ್ಕಾರ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಜನ ಬಂದಿದ್ದರು. 2 ಲಕ್ಷ ಜನರು ಸ್ಟೇಡಿಯಂ ಸುತ್ತಲೇ ಇದ್ದರು. ಬೆಂಗಳುರಿನ ಜಿಲ್ಲಾ ಉಸ್ತುವಾರಿ ಸಚಿವರೂ ಪರಿಶೀಲಿಸುತ್ತಿದ್ದರು. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ತನಿಖೆಯ ನಂತರ ಸಂಪೂರ್ಣ ಸತ್ಯ ಹೊರಬರಲಿದೆ ಎಂದರು.

ಆರ್ ಸಿಬಿ ಆಟಗಾರರು ರಾಜ್ಯಕ್ಕೆ ದೇಶಕ್ಕೆ  ಆಡುತ್ತಿಲ್ಲ ರಾಜ್ಯ ಸರ್ಕಾರ ಇವರನ್ನ ಗೌರವಿಸುವ ಅಗತ್ಯವಿರಲಿಲ್ಲ ಇದರಿಂದ ಸಮಸ್ಯೆಯಾಗಿದೆ ಎಂದು ವಕೀಲ ಹೇಮಂತ್ ರಾಜ್ ವಾದಿಸಿದರು.

ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ, ಘಟನೆ ಕುರಿತು ವರದಿ ಸಲ್ಲಿಸುವಂತಡ ಸೂಚಿಸಿ ವಿಚಾರಣೆಯನ್ನ ಜೂನ್ 10ಕ್ಕೆ ನಿಗದಿಪಡಿಸಿತು. vtu

Key words: Stampede, case, High Court, adjourned , hearing

 

The post ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...