14
July, 2025

A News 365Times Venture

14
Monday
July, 2025

A News 365Times Venture

ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್ ಬೆದರಿಕೆ

Date:

ಬೆಂಗಳೂರು, ಜೂನ್,​ 19,2025 (www.justkannada.in):  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು. ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬೆದರಿಕೆ ಮೇಲ್ ಹಿನ್ನೆಲೆ‌ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್​​​ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ‌ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ‌ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಾಗೆಯೇ ಬೆಂಗಳೂರಿನ ಪುಲಕೇಶಿ ನಗರ ಠಾಣಾ ವ್ಯಾಪ್ತಿಯ  ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಖಾಸಗಿ ಶಾಲೆಗೂ ಬೆದರಿಕೆ ಇ-ಮೇಲ್ ಬಂದಿದೆ ಎನ್ನಲಾಗಿದೆ.  ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಬೆದರಿಕೆ ಇಮೇಲ್ ಬಂದಿದ.

ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್​​ ಗಳಿಗೂ ಬಾಂಬ್​​ ಬೆದರಿಕೆ ಬಂದಿತ್ತು.vtu

Key words: Fake bomb, threat mail, Kempegowda Airport

The post ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್ ಬೆದರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಡಿಸಿಎಂ ಡಿಕೆಶಿ, ಅಶೋಕ್ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ...

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...