11
June, 2026

A News 365Times Venture

11
Thursday
June, 2026

A News 365Times Venture

ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ

Date:

ಬೆಂಗಳೂರು,ಮಾರ್ಚ್,18,2026 (www.justkannada.in): ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ  ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಸುಧಾರಣೆಗೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಕೆಪಿಸಿ ಅಕ್ರಮ ಸಂಬಂಧ  ವಿಧಾನಸಭೆಯಲ್ಲಿ  ಉತ್ತರ ನೀಡಿದ ಸಚಿವ  ಕೃಷ್ಣಭೈರೇಗೌಡ, ಕೆಪಿಎಸ್ ಸಿ ಯಲ್ಲಿ ಮಾತ್ರ ಸಮಸ್ಯೆಯಾಗುತ್ತಿದೆ.  ಕೆಇಎನಲ್ಲಿ ಯಾವುದೇ ಸಮಸ್ಯೆ ಆಗುತ್ತಿಲ್ಲ .ಕೆಇಎನಲ್ಲಿ 2000 ಪ್ರಶ್ನೆ ಸಿದ್ದಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗುತ್ತದೆ.  ಪ್ರಶ್ನಾವಳಿ ಮಾಡುವಾಗ 20-30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ ಲೋಪದೋಷ ಕಡಿಮೆ.  ಇದನ್ನೇ ಕೆಪಿಎಸ್ ಸಿಯಲ್ಲಿ ಅನುಷ್ಠಾನ ಮಾಡಲು ಚರ್ಚೆ ಆಗುತ್ತಿದೆ ಎಂದರು.

ಪ್ರತಿವರ್ಷ  ಇಂತಹ ತಿಂಗಳು ಇಂತಹ ದಿನ ಪರೀಕ್ಷೆ ನಡೆಸಬೇಕು ನಿಗದಿತ ದಿನದಲ್ಲಿ ಕಡ್ಡಾಯವಾಗಿ ಕೆಪಿಎಸ್ ಸಿ ಪರೀಕ್ಷೆ ನಡೆಸಬೇಕು. ಸಿ ಗ್ರೂಪ್ ಹಾಗೂ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯನ್ನ  ಯುಪಿಎಸ್ ಸಿ ಮಾದರಿಯಲ್ಲಿ ಮಾಡಲು ತೀರ್ಮಾನಿಸಲಾಗಿದೆ. 5 ವರ್ಷಕ್ಕೆ ಎಷ್ಟು ಹುದ್ದೆಗಳ ನೇಮಕಾತಿಯಾಗಲಿದೆ  ಈ ಬಗ್ಗೆ ಮುಂಗಡವಾಗಿ ಕ್ಯಾಲೆಂಡರ್ ಸಿದ್ದಪಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಕೆಪಿಎಸ್ ಸಿಯಲ್ಲಿ ಇನ್ನೂ ಸುಧಾರಣೆ ಮಾಡಲು ನಿರ್ಧಾರ ಮಾಡಲಾಗಿದ್ದು ಸರ್ವಪಕ್ಷ ಸದಸ್ಯರನ್ನೊಳಗೊಂಡ ಸಮಿತಿ ರಚನೆಗೆ ಸಿಎಂ ಸೂಚನೆ ನೀಡಿದ್ದಾರೆ.  ಮುಂದಿನ  ಅಧಿವೇಶನದೊಳಗೆ ಸಮಿತಿ ವರದಿ ಕೊಟ್ಟರೆ ಅದನ್ನು ಅನುಷ್ಠಾನ ಮಾಡಲು ಸರ್ಕಾರ ಸಿದ್ದ ಎಂದು ತಿಳಿಸಿದರು.

Key words:  KPSC, Illegal recruitment, Government, Assembly

The post ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಟ್ ಅಂಡ್ ರನ್ ಬೇಡ: ದಾಖಲೆ ಇದ್ರೆ ಬಿಚ್ಚಿಡಿ-ಆರ್. ಅಶೋಕ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,11,2026 (www.justkannada.in):  ಬೆಂಗಳೂರಿನಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ....

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...