ಬೆಂಗಳೂರು,ಜೂನ್,26,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೇ ನಾನು ಸಚಿವ ಸ್ಥಾನವನ್ನು ಬಿಡುತ್ತೇನೆ. ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಎಂದರು.
ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಎಂದು ಹೇಳಿಕೆ ನೀಡಿದ್ದ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಕ್ರಾಂತಿ ಆಗುತ್ತೆ ಅಂತ ಹೇಳಿಲ್ವಾ? ಯಾವ ಕ್ರಾಂತಿ ಅಂತ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಪಕ್ಷದ ಅಥವಾ ಸರ್ಕಾರದ ಮಟ್ಟದಲ್ಲಿ ಕ್ರಾಂತಿನ ಎಂಬ ವಿಚಾರವಾಗಿ, ಯಾವ ರೀತಿ ಬೇಕಾದರೂ ಯೋಚನೆ ಮಾಡಬಹುದು ರಾಜಕಾರಣ ನಿಂತ ನೀರಲ್ಲ. ಅದು ಸದಾಕಾಲ ಹರಿಯುವ ನೀರು ಎಂದರು.
Key words: KPCC, president, ministerial position, Minister, KN Rajanna
The post ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ-ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.