30
May, 2026

A News 365Times Venture

30
Saturday
May, 2026

A News 365Times Venture

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಇಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. ರಾಜ್ಯದ ಅಭಿವೃದ್ದಿ ಪೂರಕವಾದ ಬಜೆಟ್ ಮಂಡಿಸಿದ್ದೇನೆ. ಪ್ರಸಕ್ತ ವರ್ಷ 4.48 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದೇನೆ  ಕಳೆದ ಬಾರಿ 4.09 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿತ್ತು ಕಳೆದ ವರ್ಷಕ್ಕಿಂತ  38,455 ಕೋಟಿ ರೂ. ಹೆಚ್ಚಾಗಿದೆ ಎಂದರು.

ಕೇಂದ್ರ ಸರ್ಕಾರ ಜಿಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ.  ಕೆಲ ರಾಜ್ಯಗಳು ಇನ್ನೂ ಚೇತರಿಕೊಂಡಿಲ್ಲ ಮೈನಸ್ ಗ್ರೋತ್ ನಲ್ಲಿವೆ.  ಆದರೂ ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಮಹಾರಾಷ್ಟ ನಂಬರ್ ಒನ್ ಇದೆ ಎಂದರು.

ಕೇಂದ್ರ ಸರ್ಕಾರ ಅಸಹಕಾರ  ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು 10,000 ಕೋಟಿ ರೂ. ಕಡಿಮೆಯಾಗಿದೆ.  ಮುಂದೆ ಇದು 15 ಸಾವಿರ ಕೋಟಿ ರೂ.  ಕಡಿಮೆಯಾಗುತ್ತೆ ಆದರೆ ನಾವು ವಿತ್ತೀಯ ಶಿಸ್ತು ಉಲ್ಲಂಘನೆ ಮಾಡಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: budget, CM Siddaramaiah, Central government

The post ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...