16
January, 2026

A News 365Times Venture

16
Friday
January, 2026

A News 365Times Venture

ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ-ಸಚಿವ ಎಂ. ಬಿ ಪಾಟೀಲ್

Date:

ಬೆಂಗಳೂರು,ಮೇ,8,2025 (www.justkannada.in):  ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಕ್ಷಿಪ್ರವಾಗಿ ಸ್ಪಂದಿಸುವ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಅಧಿಕಾರಿಗಳು ಕರ್ನಾಟಕವನ್ನು ಕೈಗಾರಿಕಾ ಪ್ರಪಂಚದಲ್ಲಿ ಮತ್ತಷ್ಟು ಸುಭದ್ರವಾಗಿ ಮತ್ತು ಪುರೋಗಾಮಿಯಾಗಿ ಬೆಳೆಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಸಲಹೆ ನೀಡಿದ್ದಾರೆ.

ಎರಡೂ‌ ಇಲಾಖೆಗಳ ಕಿರಿಯ ಶ್ರೇಣಿ ಮತ್ತು ಉನ್ನತಾಧಿಕಾರಿಗಳಿಗೆ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ನಾವೀಗ ಏಕಕಾಲದಲ್ಲಿ ಜಾಗತೀಕರಣ ಮತ್ತು ನೆರೆಹೊರೆಯ ರಾಜ್ಯಗಳ ಸ್ಪರ್ಧೆ ಎರಡನ್ನೂ ಎದುರಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಾವು ಹೂಡಿಕೆದಾರರು ನಮ್ಮ ರಾಜ್ಯವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಈ ಹೊಣೆಗಾರಿಕೆಯನ್ನು ನಿರ್ವಹಿಸುವ ಮೂಲಕ ರಾಜ್ಯದ ಉದ್ಯಮ ವಲಯದಲ್ಲಿ ಸುಗಮ ವಹಿವಾಟು ಸಂಸ್ಕೃತಿಯನ್ನು ರೂಪಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯದ ಅರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ಹೀಗಾಗಿ ಹೂಡಿಕೆದಾರರಿಗೆ ಬೇರೆಬೇರೆ ಇಲಾಖೆಗಳಿಂದ ತ್ವರಿತವಾಗಿ ಅನುಮೋದನೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಹೂಡಿಕೆದಾರರು ವಿಳಂಬಗತಿಯನ್ನು ಸಹಿಸುವುದಿಲ್ಲ. ಸರಕಾರದ ನೀತಿಗಳು ಕೈಗಾರಿಕಾಸ್ನೇಹಿಯಾಗಿಯೇ ಇವೆ. ಅಧಿಕಾರಿಗಳು ಇವುಗಳ ಪ್ರಯೋಜನವನ್ನು ಉದ್ದಿಮೆದಾರರಿಗೆ ತಲುಪಿಸಬೇಕು. ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಈ ಮೂಲಕ ಕಾಣಿಕೆ ಕೊಡಬೇಕು ಎಂದು ಎಂ.ಬಿ ಪಾಟೀಲ್ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

Key words:  Minister, M. B. Patil, responsiveness, Industries Department, officials

The post ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ-ಸಚಿವ ಎಂ. ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...