19
July, 2025

A News 365Times Venture

19
Saturday
July, 2025

A News 365Times Venture

‘ಕೈ’ ನಾಯಕ ರಾಹುಲ್ ಗಾಂಧಿಗೆ ಜನರು ‘ಝೀರೋ  ಮಾರ್ಕ್ಸ್’ ಕೊಟ್ಟಿದ್ದಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ರಾಯಚೂರು,ಜೂನ್,16,2025 (www.justkannada.in):  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 11 ವರ್ಷದ ಆಡಳಿತಾವಧಿಗೆ ಸಿಎಂ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನರು ಝೀರೋ  ಮಾರ್ಕ್ಸ್’ ಕೊಟ್ಟಿದ್ದಾರೆ ಎಂದು ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ರಾಹುಲ್ ಗಾಂಧಿಗೆ ಜನರು ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ತಮ್ಮ ಖುರ್ಚಿ ಉಳಿಸಿಕೊಳ್ಳಲು ಕೇಂದ್ರ ಸರ್ಕಾರದ ಆಡಳಿತಕ್ಕೆ ಶೂನ್ಯ ಮಾರ್ಕ್ಸ್ ಕೊಟ್ಟಿದ್ದಾರೆ. 2014 ರಿಂದ 30ರಿಂದ 32 ಸಾರಿ ರಾಹುಲ್ ಗಾಂಧಿ ಲಾಂಚ್ ಆದರು. ಚಂದ್ರಯಾನ ಒಂದು ಸಾರಿ ಫೇಲ್ ಆದ ಮೇಲೆ ಲಾಂಚಿಂಗ್ ಯಶಸ್ವಿಯಾಯಿತು. ಆದರೆ ರಾಹುಲ್ ಗಾಂಧಿ ಯಶಸ್ವಿಯಾಗಿಲ್ಲ, ಜನ ಝಿರೋ ಮಾರ್ಕ್ಸ್ ಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್‌ ನವರಿಗೆ ಸಾಮಾಜಿಕ ಬದ್ದತೆಯಿಲ್ಲ. ನೆಹರು ಅವರಿಂದ ರಾಜೀವ್ ಗಾಂಧಿ ತನಕ ಮೀಸಲಾತಿಗೆ ವಿರೋಧಿಸಿದ್ದರು. ಮೀಸಲಾತಿಗೆ ವಿರೋಧ ಮಾಡಿ ಅಂಬೇಡ್ಕರ್ ಗೆ ಅಪಮಾನ ಮಾಡಿದ್ದರು. ಪಾರ್ಲಿಮೆಂಟ್ ನಲ್ಲಿ ರಾಜೀವ್ ಗಾಂಧಿಯ ಅತೀ ದೊಡ್ಡ ಭಾಷಣ ಮೀಸಲಾತಿಯ ವಿರುದ್ದವೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದರು.vtu

Key words: People, Rahul Gandhi,  Zero Marks, Union Minister, Prahlad Joshi

The post ‘ಕೈ’ ನಾಯಕ ರಾಹುಲ್ ಗಾಂಧಿಗೆ ಜನರು ‘ಝೀರೋ  ಮಾರ್ಕ್ಸ್’ ಕೊಟ್ಟಿದ್ದಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು...