16
February, 2026

A News 365Times Venture

16
Monday
February, 2026

A News 365Times Venture

ಕೋಟ್ಯಾಂತರ ರೂ. ಆಸ್ತಿ ರಕ್ಷಿಸಿಕೊಳ್ಳಲು MUDA ಮೀನಾಮೇಷ: ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗಂಗರಾಜು ಆಗ್ರಹ

Date:

ಮೈಸೂರು,ಮೇ,21,2025 (www.justkannada.in): ಮುಡಾದ ಕೋಟ್ಯಾಂತರ ರೂ. ಆಸ್ತಿ  ರಕ್ಷಿಸಿಕೊಳ್ಳುವಲ್ಲಿ  ಅಧಿಕಾರಿಗಳು ವಿಫಲರಾಗಿದ್ದಾರೆ. ತಮ್ಮ ಆಸ್ತಿ ತಾವೇ ರಕ್ಷಣೆ ಮಾಡಿಕೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಡಾ‌ ಹೋರಾಟಗಾರ ಗಂಗರಾಜು ಆಗ್ರಹಿಸಿದ್ದಾರೆ.

ಅಬ್ದುಲ್ ವಾಹಿದ್ ಎಂಬುವವರ ವಿರುದ್ದ ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಕಬಳಿಸಿದ್ದ ಆರೋಪ ಕೇಳಿ ಬಂದಿದೆ. ಮೈಸೂರು ತಾಲೂಕು ಕಸಬಾ ಹೋಬಳಿ ದೇವನೂರು ಬಡಾವಣೆಯ  ಸರ್ವೆ ನಂ.148,149,149/2,149/3 ಹಾಗು 150ರ ಜಮೀನು ಕಬಳಿಸಿದ್ದು  ಜಿಪಿಎ ಹೆಸರಿನಲ್ಲಿ 39 ಗುಂಟೆ ಭೂಮಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ಅಬ್ದುಲ್ ಗೆ ಮುಡಾ ಅಕ್ರಮವಾಗಿ 40 ಕ್ಕೂ ಹೆಚ್ಚು ಸೈಟ್ ನೀಡಿದ್ದು ಸರ್ಕಾರದಿಂದ ಆಸ್ತಿ ವಶಕ್ಕೆ ತೆಗೆದುಕೊಳ್ಳುವಂತೆ ಖಡಕ್ ಆದೇಶ ಬಂದಿದ್ದರೂ ಸಹ ಅಧಿಕಾರಿಗಳು ಆದೇಶವನ್ನ ಪದೇ ಪದೇ ಗಾಳಿಗೆ ತೂರುತ್ತಿದ್ದಾರೆ ಎನ್ನಲಾಗಿದೆ.

ಮುಡಾದ ಆಸ್ತಿ ರಕ್ಷಣೆಗೆ ಪದೇ- ಪದೇ ಸಮಯ ನಿಗದಿಪಡಿಸಿ ಮುಂದೂಡಿಕೆ ಮಾಡುತ್ತಿದ್ದು, ಉದಯಗಿರಿ ಠಾಣಾ ಪೊಲೀಸರು ಬಂದೋಬಸ್ತ್ ನೆಪ ಹೇಳಿ ನಾಲ್ಕು ಬಾರಿ ಮುಂದೂಡಿಕೆ ಮಾಡಿದ್ದಾರೆ. ಇಂದು ಬೆಳಗ್ಗೆ ತೆರವು ಮಾಡಲು ಬಂದೋಬಸ್ತ್ ಕಲ್ಪಿಸುವಂತೆ ಸೂಚನೆ ನೀಡಲಾಗಿತ್ತು. ನಿನ್ನೆವರೆಗೂ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು ಬೆಳಗ್ಗೆ ಬಂದೋಬಸ್ತ್ ಕ್ಯಾನ್ಸಲ್‌ ಮಾಡಿದ್ದು, ಇದೀಗ ಮುಡಾದ ಅಧಿಕಾರಿಗಳು ಬಂದೋಬಸ್ತ್ ಇಲ್ಲದೆ ಆಸ್ತಿ ವಶಕ್ಕೆ ತೆಗೆದುಕೊಳ್ಳಲು‌ ಆಗಲ್ಲ ಎನ್ನುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಮುಡಾ‌ ಹೋರಾಟಗಾರ ಗಂಗರಾಜು, ಪೊಲೀಸರು- ಮುಡಾ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮುಡಾದ ಕೋಟ್ಯಾಂತರ ರೂ ಆಸ್ತಿ  ರಕ್ಷಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಪೊಲೀಸರು ಪದೇ ಪದೇ ನೆಪ ಹೇಳುತ್ತಿದ್ದಾರೆ. ಈ ಕೂಡಲೇ ಉದಯಗಿರಿ ಠಾಣಾ ಇನ್ಸ್ ಪೆಕ್ಟರ್ ಸುಧಾಕರ್ ಸಸ್ಪೆಂಡ್ ಆಗಬೇಕು. ಮುಡಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

Key words: MUDA, protect, property, Gangaraju

The post ಕೋಟ್ಯಾಂತರ ರೂ. ಆಸ್ತಿ ರಕ್ಷಿಸಿಕೊಳ್ಳಲು MUDA ಮೀನಾಮೇಷ: ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗಂಗರಾಜು ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ....

ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ...

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು...

ಮೈಸೂರು ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ” Gen Z”  ಥೀಮ್ ಪೋಸ್ಟ್ ಆಫೀಸ್ ಯೋಜನೆ

  ಮೈಸೂರು, ಫೆ.೧೪,೨೦೨೬:  ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ‘Gen Z...