2
May, 2026

A News 365Times Venture

2
Saturday
May, 2026

A News 365Times Venture

ಖಾತೆ ಬದಲಾವಣೆ ಸುಳ್ಳು, ಸತ್ಯಕ್ಕೆ ದೂರವಾದದ್ದು-ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು, ಜೂನ್​,9,2025 (www.justkannada.in): ಖಾತೆ ಬದಲಾವಣೆ ಎಂಬುದು ವದಂತಿ. ಇದು ಸತ್ಯಕ್ಕೆ ದೂರವಾದದ್ದು, ಸುಳ್ಳು ಎಂದು ಗೃಹ ಸಚಿವ  ಡಾ. ಜಿ. ಪರಮೇಶ್ವರ್​ ತಿಳಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ಪ್ರಕರಣ ಬೆನ್ನಲ್ಲೆ  ಗೃಹ ಸಚಿವ ಜಿ ಪರಮೇಶ್ವರ್, ಖಾತೆ ಬದಲಾಯಿಸಲು ಕೇಳಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಕುರಿತು ಮಾತನಾಡಿರುವ ಪರಮೇಶ್ವರ್, ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಖಾತೆ ಬದಲಾವಣೆಗೆ ಕೇಳಿದ್ದೇನೆ ಅನ್ನೋ ವಿಚಾರವನ್ನು ಹೇಳಿದ್ಯಾರು? ಏನೇ ಇದ್ದರೂ ನನ್ನನ್ನೇ ಕೇಳಬೇಕು ಅಲ್ಲವೇ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರುವುದಿಲ್ಲ. ಏನೇ ಇದ್ದರೂ ನನ್ನನ್ನೇ ಕೇಳಿ, ಉತ್ತರ ಕೊಡುತ್ತೇನೆ ಎಂದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ​ಗೆ  ದೂರವಾಣಿ ಮೂಲಕ ಮಾಹಿತಿ ನೀಡಿದ್ದೇವೆ.  ಆದರೆ ಯಾರೂ ನಮ್ಮನ್ನು ದೆಹಲಿಗೆ ಕರೆದಿಲ್ಲ, ಮುಂಬೈಗೂ ಕರೆದಿಲ್ಲ. ಇದು ಸತ್ಯಕ್ಕೆ ದೂರವಾದದ್ದು. ಹೈಕಮಾಂಡ್​ ನವರು ಮಾಹಿತಿ ಕೇಳುತ್ತಾರೆ, ಅವರಿಗೆ ಆತಂಕ ಇರುತ್ತೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಬಳಿ ಮಾಹಿತಿ ಕೇಳುತ್ತಾರೆ ಎಂದರು.vtu

Key words: Home Minister, Change, Dr. G. Parameshwar, lie

The post ಖಾತೆ ಬದಲಾವಣೆ ಸುಳ್ಳು, ಸತ್ಯಕ್ಕೆ ದೂರವಾದದ್ದು-ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ ಅವರನ್ನು...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...