13
June, 2026

A News 365Times Venture

13
Saturday
June, 2026

A News 365Times Venture

ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ

Date:

ಬೆಂಗಳೂರು,ಜೂನ್,5,2026 (www.justkannada.in) ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿರುವ ಸಚಿವ ರಾಮಲಿಂಗರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮಲಿಂಗರೆಡ್ಡಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದರೂ, ತಮಗೆ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಖಾತೆ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇಂದು ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ ರಾಮಲಿಂಗರೆಡ್ಡಿ, ಖಾತೆ ಹಂಚಿಕೆ ಕುರಿತು ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಬೆಳವಣಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲಾಗಿ ಪರಿಣಮಿಸಿದ್ದು, ಪಕ್ಷದ ಹಿರಿಯ ನಾಯಕರು ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದಾರೆ.

Key words: RamalingaReddy, KarnatakaPolitics, DK Shivakumar, CabinetCrisis

The post ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು

ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ...

ಕೆ.ಅಣ್ಣಾಮಲೈ ಬಿಜೆಪಿ ತೊರೆದಿರುವುದು ಅದು ಅವರ ನಿರ್ಧಾರ- ರಾಧಾಮೋಹನ್ ದಾಸ್

ಮಂಗಳೂರು,ಜೂನ್,13 2026 (www.justkannada.in):  ಕೆ.ಅಣ್ಣಾಮಲೈ ಬಿಜೆಪಿ ಪಕ್ಷ ತೊರೆದಿರುವುದು ಅದು ಅವರ...

ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್

ಬೆಂಗಳೂರು,ಜೂನ್,13,2026 (www.justkannada.in): ಆಗಾಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದ ಬಿಜೆಪಿ...

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...