30
July, 2025

A News 365Times Venture

30
Wednesday
July, 2025

A News 365Times Venture

ಗುಪ್ತಚರ ಮುಖ್ಯಸ್ಥರಿಗೆ ಸರಕಾರದ ಸಾಫ್ಟ್ ಕಾರ್ನರ್: ಸಿಎಂ ರತ್ತ ಬೊಟ್ಟು ಮಾಡಿದ ಭಾಸ್ಕರ್ ರಾವ್.

Date:

ಮೈಸೂರು,ಜೂನ್,7,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಗುಪ್ತಚರ ಇಲಾಖೆ ವೈಪಲ್ಯ ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಇಂಟಲಿಜೆನ್ಸ್ ಹೆಡ್ ಅಮಾನತು ಮಾಡದೆ ಬರೀ ವರ್ಗಾವಣೆ ಮಾಡಿದೆ. ಹೀಗಾಗಿ ಯಾಕೆ ಈ ಸಾಫ್ಟ್ ಕಾರ್ನರ್ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್, ಈ ಬಗ್ಗೆ ನಿಮ್ಮೂರಿನವರೇ ಆದ ದೊರೆಯನ್ನು ಕೇಳಿ ಎಂದು ಸಿದ್ದರಾಮಯ್ಯ ಅವರತ್ತ ಬೊಟ್ಟು ಮಾಡಿದರು.

ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ಅಮಾನತು ಮಾಡದೆ ವರ್ಗಾವಣೆ ಮಾಡಿದ ವಿಚಾರದ ಬಗ್ಗೆ  ಮೈಸೂರಿನಲ್ಲಿ ಮಾತನಾಡಿದ ಭಾಸ್ಕರ್ ರಾವ್,  ‌ಕುರ್ಚಿಯ ಮೇಲೆ ಕುಳಿತ ದೊರೆಯನ್ನ ಕೇಳಬೇಕು. ಸಿಕ್ಕ‌ ಸಿಕ್ಕವರಿಗೂ ಕೂಡ ಸುಣ್ಣ ಹಾಕಬೇಕು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಸರಿಯಲ್ಲ. ಸಿಎಂಗೆ ಯಾರು ಅಡ್ವೈಸ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಇದನ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು, ನಿವೃತ್ತ ನ್ಯಾಯಾಧೀಶರ ತನಿಖೆ ‌ಬೇಡ. ಮೂರು ತಿಂಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪೊಲೀಸ್ ಅಧಿಕಾರಿಗಳ ತಲೆದಂಡ ವಿಚಾರ ಕುರಿತು ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, ಯಾರನ್ನಾದರೂ ಬಲಿಪಶು ಮಾಡಬೇಕಿತ್ತು. ಅದಕ್ಕೆ ಸರ್ಕಾರ ಯಾರನ್ನಾದರೂ ಹೊಣೆ ಮಾಡಬೇಕಿತ್ತು. ಒಂದು ಮಾಂಸದ ತುಂಡು ಬಿಸಾಕಿದಂತೆ ಬಿಸಾಕಿದ್ದಾರೆ. ದಯಾನಂದ್ ಉತ್ತಮ ಅಧಿಕಾರಿಯಾಗಿ ಕೆಲಸ‌ಮಾಡಿದ್ದಾರೆ. ಅವರನ್ನ ಅಮಾನತು ಮಾಡಿದ್ದು ಸರಿಯಲ್ಲ. ಒಬ್ಬ ಪುಟಗೋಸಿ ನನ್ ಮಗನ ಮಾತು ಕೇಳ್ತೀರಿ. ಅವನು ಲಂಡನ್ ಗೆ ಹೋಗಬೇಕು ಅಂತ ನೀವು ಅವನ ಮಾತು ಕೇಳ್ತೀರಿ? ನೀವು ಅವನನ್ನ ಕೇಳಿ ಕಾರ್ಯಕ್ರಮ ಆಯೋಜನೆ ಮಾಡ್ತೀರಿ? ನಿಮ್ಮ ಜುಟ್ಟು ಅವನ ಕೈಗೆ ಯಾಕೆ ಕೊಡ್ತೀರಿ? ಯಾವುದೇ ಪ್ಲಾನಿಂಗ್ ಇಲ್ಲದೇ ಕಾರ್ಯಕ್ರಮ ರೂಪಿಸಿದ್ದೀರಿ. ಇದಕ್ಕೆಲ್ಲ ಸರ್ಕಾರವೇ ನೇರ ಹೊಣೆ ಎಂದು ಭಾಸ್ಕರ್ ರಾವ್  ಆರೋಪಿಸಿದರು.vtu

Key words: Government, soft corner, intelligence chief, Bhaskar Rao, CM Siddaramaiah

The post ಗುಪ್ತಚರ ಮುಖ್ಯಸ್ಥರಿಗೆ ಸರಕಾರದ ಸಾಫ್ಟ್ ಕಾರ್ನರ್: ಸಿಎಂ ರತ್ತ ಬೊಟ್ಟು ಮಾಡಿದ ಭಾಸ್ಕರ್ ರಾವ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...