30
April, 2026

A News 365Times Venture

30
Thursday
April, 2026

A News 365Times Venture

ಚಾಂಪಿಯನ್ಸ್ ಟ್ರೋಫಿ ಸೋಲಿನ ಬೆನ್ನಲ್ಲೆ ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ

Date:

ದುಬೈ,ಮಾರ್ಚ್,5,2025 (www.justkannada.in):  ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ  ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ತಂಡದ ಕ್ಯಾಪ್ಟನ್ ಆಗಿದ್ದ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ನಿನ್ನೆ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎದುರಾಗಿದ್ದವು. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್ ಗೇರಿದೆ.

ಈ ಮಧ್ಯೆ  ಪಂದ್ಯದ ಮುಗಿದ ಬಳಿಕ ಆಸ್ಟ್ರೇಲಿಯಾ ಕ್ಯಾಪ್ಟನ್ ಸ್ಟೀವ್ ಸ್ಮಿತ್ ಅವರು ಏಕದಿನ ಕ್ರಿಕೆಟ್  ನಿಂದ ನಿವೃತ್ತರಾಗುವುದಾಗಿ ತಿಳಿಸಿದ್ದಾರೆ. ಸ್ಟೀವ್ ‍ಸ್ಮಿತ್ ಅವರು ಟೆಸ್ಟ್ ಮತ್ತು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ.

ಲೆಗ್ ಸ್ಪಿನ್ ಆಲ್ ರೌಂಡರ್ ಆಗಿ 2010 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾದಾರ್ಪಣೆ ಮಾಡಿದ  ಸ್ಟೀವ್  ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ ಮತ್ತು 12 ಶತಕಗಳು ಮತ್ತು 35 ಅರ್ಧಶತಕಗಳು ಮತ್ತು 28 ವಿಕೆಟ್ ಗಳನ್ನು ಪಡೆದಿದ್ದಾರೆ.

ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾದ 2015 ಮತ್ತು 2023 ರ ಐಸಿಸಿ ವಿಶ್ವಕಪ್ ವಿಜೇತ ತಂಡಗಳ ಸದಸ್ಯರಾಗಿದ್ದರು. ಪ್ಯಾಟ್ ಕಮಿನ್ಸ್ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ 2025ರ ಚಾಂಪಿಯನ್ಸ್ ಟ್ರೋಫಿಗೆ ಸ್ಟೀವ್ ಸ್ಮಿತ್ ಅವರನ್ನ ಆಸ್ಟ್ರೇಲಿಯಾ ತಂಡದ ನಾಯಕರನ್ನಾಗಿ ಮಾಡಲಾಗಿತ್ತು.

Key words: Steve Smith, retires, ODI cricket

The post ಚಾಂಪಿಯನ್ಸ್ ಟ್ರೋಫಿ ಸೋಲಿನ ಬೆನ್ನಲ್ಲೆ ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...