13
November, 2025

A News 365Times Venture

13
Thursday
November, 2025

A News 365Times Venture

ಜನಾಭಿಪ್ರಾಯದ‌ ಮೇಲೆ‌ ರಾಮನಗರ‌ ಜಿಲ್ಲೆ ಹೆಸರು ಬದಲಾವಣೆ- ಹೆಚ್ ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್

Date:

ಮೈಸೂರು,ಮೇ,23,2025 (www.justkannada.in): ರಾಮನಗರ ಜಿಲ್ಲೆ ಹೆಸರನ್ನ ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಿದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರಕ್ಕೆ ಹೆಸರು ಬದಲಿಸುವ ಅಧಿಕಾರವಿದೆ. ನಾವು ಆ ಕಾರಣಕ್ಕೆ ಬದಲಾಯಿಸಿದ್ದೇವೆ. ರಾಮನಗರ‌ ಜಿಲ್ಲೆ ಮಾಡಿದಾಗ ಯಾವ ಇತಿಹಾಸ ಇತ್ತು..? ಜನರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮಾಡಿ ಅಂದಿದ್ದಾರೆ. ಎಲ್ಲವನ್ನೂ ಜನಾಭಿಪ್ರಾಯದ‌ ಮೇಲೆ‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿರು.

ಮೈಸೂರಿನ ಕೆ.ಆರ್.ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ‌, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣದ ಮೇಲೆ ಇಡಿ ದಾಳಿ ವಿಚಾರ, ಇಡಿ ಅವರು ತನಿಖೆ ಮಾಡಲಿ. ಕಪ್ಪು ಹಣ ಇದ್ದರೆ ಪತ್ತೆ ಹಚ್ಚಿ ಅಂತ ಹೇಳಲ್ಲ. ನೀವು ರಾಜಕೀಯ ದುರುದ್ದೇಶದಿಂದ ಮಾಡಬಾರದು. ಸಂಸ್ಥೆಗಳು ಇರುವುದು ಕಪ್ಪು ಹಣ ತಡೆಗಟ್ಟಲು ಇವೆ. ಪರಮೇಶ್ವರ್ ಕೇಸ್ ನಲ್ಲಿ‌ ರಾಜಕೀಯ ಪ್ರೇರಿತ ದಾಳಿ ಅನಿಸಿದೆ. ಸುಪ್ರೀಂಕೋರ್ಟ್ ಕೂಡ ಗಮನ ಹರಿಸಿ‌ ಮಿತಿ ಮೀರುತ್ತಿದ್ದೀರಿ ಎಂದಿದೆ. ಅವರ ಅಬ್ಜರ್ವೇಷನ್ ಯಾವ ಕಾರಣಕ್ಕೆ ಮಾಡಿದ್ದಾರೆ ಅಂತ ಗೊತ್ತಿಲ್ಲ ಎಂದರು.

ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಅಪರಾಧ ಪ್ರಕರಣ‌ ಕಡಿಮೆ ಆಗಿವೆ. ಬಿಜೆಪಿ ಅವರ ಕಾಲಕ್ಕೆ ಹೋಲಿಸಿದರೆ ಕಡಿಮೆ ಆಗಿವೆ. ನಾವು ಅಪರಾಧ ನಿಲ್ಲಿಸಿಬಿಡುತ್ತೇವೆ ಅಂತ‌ ಹೇಳುತ್ತಿಲ್ಲ. ಆದರೆ ನಿಯಂತ್ರಣಕ್ಕೆ‌ ತರುತ್ತಿದ್ದೀವಿ ಎಂದರು.

ಕೋವಿಡ್ ಕೇಸ್‌ಗಳ‌ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಟೆಸ್ಟಿಂಗ್ ಸೇರಿ ಎಲ್ಲಾ‌ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಯಂಗ್ ಇಂಡಿಯಾ ಕಂಪನಿಗೆ ದೇಣಿಗೆ ಡಿಕೆ ಶಿವಕುಮಾರ್, ಸುರೇಶ್ ಅವರ ವಿರುದ್ಧ ಚಾರ್ಜ್ ಶೀಟ್ ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ದೇಣಿಗೆ ಕೊಡುವುದು ತಪ್ಪಾ? ದೇಣಿಗೆ ಕೊಡುವುದು ತಪ್ಪೇನಲ್ಲ ಎಂದರು.

Key words: Mysore, CM Siddaramaiah , Change, Ramanagara, Name,

The post ಜನಾಭಿಪ್ರಾಯದ‌ ಮೇಲೆ‌ ರಾಮನಗರ‌ ಜಿಲ್ಲೆ ಹೆಸರು ಬದಲಾವಣೆ- ಹೆಚ್ ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...