25
August, 2026

A News 365Times Venture

25
Tuesday
August, 2026

A News 365Times Venture

ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ

Date:

ಬೆಂಗಳೂರು, ಏಪ್ರಿಲ್​ 26,2025 (www.justkannada.in):  ಸಿಇಟಿ ಪರೀಕ್ಷೆ  ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.

ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ  ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್‌ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Key words: Janivara Case, PIL, High Court

The post ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...