12
August, 2026

A News 365Times Venture

12
Wednesday
August, 2026

A News 365Times Venture

ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ

Date:

ಬೆಂಗಳೂರು, ಏಪ್ರಿಲ್​ 26,2025 (www.justkannada.in):  ಸಿಇಟಿ ಪರೀಕ್ಷೆ  ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.

ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ  ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್‌ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Key words: Janivara Case, PIL, High Court

The post ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ...