11
March, 2026

A News 365Times Venture

11
Wednesday
March, 2026

A News 365Times Venture

ಜಮೀನಿನ ಬೆಳೆಗೆ “ ವಕ್ರದೃಷ್ಠಿ”  ಬೀಳದಂತೆ ರೈತನ “ ಮಾಡೆಲ್‌ “ ಪ್ಲಾನ್..!

Date:

ಮೈಸೂರು, ಫೆ.೨೦, ೨೦೨೫:  ಫಲವತ್ತಾದ ಕೃಷಿ ಭೂಮಿಯಲ್ಲಿ ಸೊಗಸಾಗಿ ಬೆಳೆದ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೆಚ್ಚಿದ ಬೊಂಬೆಗಳನ್ನು  ಅಳವಡಿಸುವುದನ್ನ ನೋಡಿದ್ದೇವೆ. ಆದ್ರೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚುಂಚನಹಳ್ಳಿಯ ಬಳಿ ಇರುವ  ಕಕ್ಕನ ಹಟ್ಟಿ ಗ್ರಾಮದ  ರೈತ ಐನಾತಿ ಐಡಿಯಾ ಹುಡುಕಿದ್ದಾನೆ. ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರು ಮತ್ತು ದಿನನಿತ್ಯ ಸಂಚರಿಸುವ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣನಾಗಿದ್ದಾನೆ.

ನಂಜನಗೂಡು ತಾಲೂಕಿನ ಕಕ್ಕನಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿರುವುದು.

ತನ್ನ ನಾಲ್ಕು ಎಕರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರು ಮತ್ತು ದಾರಿಹೋಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದು, ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.

ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ. ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪಡ್ಡೆ ಹುಡುಗರ ನಿದ್ದೆ ಗೆಡಿಸಿರುವುದಂತೂ ಸುಳ್ಳಲ್ಲ.

key words: The farmer, model photos, crop, “crooked”.

The farmer’s “model” plan is to ensure that the crop of the farm does not get “crooked”.

The post ಜಮೀನಿನ ಬೆಳೆಗೆ “ ವಕ್ರದೃಷ್ಠಿ”  ಬೀಳದಂತೆ ರೈತನ “ ಮಾಡೆಲ್‌ “ ಪ್ಲಾನ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...