18
July, 2025

A News 365Times Venture

18
Friday
July, 2025

A News 365Times Venture

ಜಾತಿಗಣತಿ ವರದಿ: ಸಿಎಂ ಸಿದ್ದರಾಮಯ್ಯರಿಂದ ಡಿಕೆಶಿ ಅವರನ್ನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ- ಶಾಸಕ ಶ್ರೀವತ್ಸ

Date:

ಮೈಸೂರು,ಏಪ್ರಿಲ್,17,2025 (www.justkannada.in):   ಜಾತಿ ಜನಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಅವರ ಒಂದು ರಾಜಕೀಯ ತಂತ್ರಗಾರಿಕೆ ಇದಾಗಿದೆ. ಈ ಮೂಲಕ  ಡಿಕೆ ಶಿವಕುಮಾರ್ ರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವಿರಬಹುದು ಎಂದು  ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶ್ರೀವತ್ಸ, ಜಾತಿ ಜನಗಣತಿ ವರದಿ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆದು ಸರ್ಕಾರ ವೈಫಲ್ಯಗಳನ್ನ ಮುಚ್ಚಿಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.  ಇದೊಂದು ಎದುರಾಳಿ ಮಣಿಸುವ ತಂತ್ರವಾಗಿದೆ. ಸಿದ್ದರಾಮಯ್ಯ ಅಧಿಕಾರ ಅವಧಿ ಮುಕ್ತಾಯವಾಗುವ ಬೆನ್ನಲ್ಲೇ ಡಿಕೆಶಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದಾಗಿದೆ ಎನ್ನಿಸುತ್ತಿದೆ ಎಂದು ಲೇವಡಿ ಮಾಡಿದರು.

ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಇದನ್ನ ಸ್ವತಃ ತಮ್ಮ ಪಕ್ಷದ ಶಾಸಕರು, ಸಚಿವರೇ ಒಪ್ಪುತ್ತಿಲ್ಲ. ಹೀಗಿದ್ದರೂ ತಮ್ಮ ವರದಿ ತರುತ್ತಿರುವ ಉದ್ದೇಶವೇ ಬೇರೆ ಇದೆ  ಎನ್ನಿಸುತ್ತೆ. ನೋಡೋಣ ಯಾವ ಪ್ಲಾನ್ ಹೇಗೆ ವರ್ಕ್ ಔಟ್ ಆಗಲಿದೆ. ಮುಖ್ಯಮಂತ್ರಿ ಒಂದು ಟೆಸ್ಟ್ ಡೋಸ್ ನೀಡಿದ್ದಾರೆ ಅಷ್ಟೇ. ಜಾತಿಗಣತಿ ಮೂಲಕ  ಹಗರಣಗಳನ್ನು ಮರೆ ಮಾಚುವ  ಕೆಲಸ ಮಾಡುತ್ತಿದೆ. ಎಲ್ಲರ ಗಮನ ಬೇರೆಡೆ ಸೆಳೆಯುವ ತಂತ್ರ ಇದಾಗಿದೆ. ಮುಂದೆ ಸರ್ಕಾರದ ವಿರುದ್ಧ ಸಾಧು ಸಂತರು, ಸಾಹಿತಿಗಳು ಹೊರಟಕ್ಕೆ ಇಳಿಯಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಗೋಕಾಕ್ ಮಾದರಿ ಚಳುವಳಿ ನಡೆಯಲಿದೆ ಶಾಸಕ ಟಿ ಎಸ್ ಶ್ರೀವತ್ಸ  ತಿಳಿಸಿದರು.

Key words: Caste Census Report,  CM Siddaramaiah, DK Shivakumar, MLA,  Srivatsa

The post ಜಾತಿಗಣತಿ ವರದಿ: ಸಿಎಂ ಸಿದ್ದರಾಮಯ್ಯರಿಂದ ಡಿಕೆಶಿ ಅವರನ್ನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ- ಶಾಸಕ ಶ್ರೀವತ್ಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.

ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ...

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...