6
June, 2026

A News 365Times Venture

6
Saturday
June, 2026

A News 365Times Venture

ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ

Date:

ಮಂಡ್ಯ,ಜುಲೈ,11,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವುದುನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಮಾಧ್ಯಮದ ಜೊತೆ  ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಸೆ. ಅವರು ಸಿಎಂ ಆಗುವುದು ನಿಶ್ಚಿತ ಎಂದರು.

ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕೆ ಕಾಂಗ್ರೆಸ್ ಗೆ ಹೆಚ್ಚು ಸೀಟು  ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.vtu

Key words: DK Shivakumar, becomes, CM, Nischalanandanath Swamiji

The post ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್

ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ...

ಕೊಲೆ ಯತ್ನ ಆರೋಪ ಪ್ರಕರಣ: RTI ಕಾರ್ಯಕರ್ತ ಗಂಗರಾಜುಗೆ ಜಾಮೀನು ಮಂಜೂರು

  ಮೈಸೂರು ಜೂ.೦೫,೨೦೨೬: ಕೊಲೆ ಯತ್ನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಆರ್‌ಟಿಐ ಕಾರ್ಯಕರ್ತ...

ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ತುಮಕೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಳಿಕ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾ...

ಸಚಿವರ ಅಸಮಾಧಾನ ವಿಚಾರ: ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕು-ಆರ್.ವಿ ದೇಶಪಾಂಡೆ

ಬೆಂಗಳೂರು,ಜೂನ್,5,2026 (www.justkannada.in):  ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೆ ಸಚಿವರಾದ ರಾಮಲಿಂಗರೆಡ್ಡಿ ಮತ್ತು...