30
July, 2025

A News 365Times Venture

30
Wednesday
July, 2025

A News 365Times Venture

ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ

Date:

ಬೆಂಗಳೂರು,ಮಾರ್ಚ್,19,2025 (www.justkannada.in):  ಕೃಷಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನ ಸಚಿವರು ತಮ್ಮ ತಮ್ಮ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಎಂದು ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆಡಳಿತ ಪಕ್ಷದ ಶಾಸಕ ಕೆ.ಎಸ್ ಆನಂದ್, ಬಜೆಟ್ ನಲ್ಲಿ ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.  ಇಂಜಿನಿಯರಯಿಂಗ್ ಕಾಲೇಜನ್ನ ಉನ್ನತ ಶಿಕ್ಷಣ ಸಚಿವರು ತಮ್ಮ ಕ್ಷೇತ್ರ ಚಿಂತಾಮಣಿಗೆ ತೆಗೆದುಕೊಂಡು ಹೋಗುತ್ತಾರೆ.  ಕೃಷಿಕಾಲೇಜನ್ನ ಕೃಷಿ ಸಚಿವರು ಮಂಡ್ಯಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಸಚಿವರು ಅವರವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದರೇ ನಮ್ಮ ಪರಿಸ್ಥಿತಿ ಏನು..? ಎಂದು ಪ್ರಶ್ನಿಸಿದರು.

ಇದರಿಂದ ಕೆಲವೇ ಕೆಲ ಜಿಲ್ಲೆಗಳಲ್ಲಿ ಅಭಿವೃದ್ದಿ ಆಗುತ್ತೆ. ಸಿಎಂ, ಸಚಿವರು ತಮ್ಮ ತಮ್ಮ ಕ್ಷೇತ್ರವನ್ನ ನೋಡುತ್ತಾ ಹೋದರೇ ಇಡೀ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಿಎಂ ಸಚಿವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

Key words: Legislative Assembly, Congress, MLA, Ministers

The post ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...