12
August, 2026

A News 365Times Venture

12
Wednesday
August, 2026

A News 365Times Venture

ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Date:

ಬೆಂಗಳೂರು, ಆಗಸ್ಟ್, 4,2025 (www.justkannada.in):  ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ  ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ  ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ

ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತತ್ ಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲೂ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.

Key words: Minister, Ishwar Khandre, investigation, 19 peacocks, death

The post ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ...

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...