8
July, 2025

A News 365Times Venture

8
Tuesday
July, 2025

A News 365Times Venture

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

Date:

ಮಂಡ್ಯ,ಏಪ್ರಿಲ್,22,2025 (www.justkannada.in): ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯನ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು. ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು ಸಿಎಂ ಸಿದ್ದರಾಮಯ್ಯ‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

Key words:  worship,  God , optimistic,  CM Siddaramaiah

The post ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...