13
November, 2025

A News 365Times Venture

13
Thursday
November, 2025

A News 365Times Venture

ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆ ಬಿಡುಗಡೆ

Date:

ಮೈಸೂರು,ಮೇ,24,2025 (www.justkannada.in): ಶಾಶ್ವತ ಚಿತ್ರಾತ್ಮಕ ಮುದ್ರೆ (Permanent Pictorial cancellation)ಗಳು ಪ್ರವಾಸಿಗರನ್ನು ಆಕರ್ಷಿಸುವ ಜೊತೆಗೆ ಆ ಸ್ಥಳದ ಪ್ರಾಮುಖ್ಯತೆಯನ್ನು ಜಗತ್ತಿಗೆ ಪ್ರಚುರ ಪಡಿಸುತ್ತವೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್  ಹೇಳಿದರು.

ಮೈಸೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಭಾರತೀಯ ಅಂಚೆ ಹೊರ ತಂದಿರುವ ಮೈಸೂರು ನಗರದ ದೊಡ್ಡ ಗಡಿಯಾರ (ಸಿಲ್ವರ್ ಜ್ಯುಬಿಲಿ ಕ್ಲಾಕ್ ಟವರ್) ದ ಶಾಶ್ವತ ಚಿತ್ರಾತ್ಮಕ ಮುದ್ರೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಮೈಸೂರು ದೇಶದ ಪ್ರಮುಖ ಪ್ರವಾಸಿ ತಾಣವಾಗಿದ್ದು ಈ ಶಾಶ್ವತ ಚಿತ್ರಾತ್ಮಕ ಮುದ್ರೆಯು ವಿಶ್ವದ ಪ್ರವಾಸಿಗರಿಗೆ ದೊಡ್ಡ ಗಡಿಯಾರದ ಮಹತ್ವವನ್ನು ತಿಳಿಸುತ್ತದೆ ಎಂದು ತಿಳಿಸಿದರು.

ದೊಡ್ಡಗಡಿಯಾರ ಮೈಸೂರಿನ ಪ್ರಮುಖ ಆಕರ್ಷಣೆಗಳಲ್ಲೊಂದಾಗಿದ್ದು ನಗರದ ಹೆಗ್ಗುರುತಾಗಿದೆ ಎಂದು ಹೇಳಿದ ಮೈಸೂರು ಅಂಚೆವಿಭಾಗದ ಉಪ ಅಧೀಕ್ಷಕ ವಿ.ಎಲ್.ನವೀನ್ ಅವರು ಇನ್ನೆರಡು ವರ್ಷಗಳಲ್ಲಿ ದೊಡ್ಡ ಗಡಿಯಾರ ನಿರ್ಮಾಣವಾಗಿ 100 ವರ್ಷಗಳಾಗಲಿದ್ದು ಅಂಚೆ ಇಲಾಖೆ ವಿಶೇಷ ಲಕೋಟೆ ಅಥವಾ ಚಿತ್ರಿದ ಅಂಚೆ ಕಾರ್ಡ್ ಅನ್ನು ಹೊರತರುವ ಆಶಯವನ್ನು ಹೊಂದಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಪ್ರಧಾನ ಅಂಚೆಕಚೇರಿಯ ಹಿರಿಯ ಅಂಚೆ ಪಾಲಕ ಸೋಮಯ್ಯ ಅವರು ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆಯನ್ನು ಬಿಡುಗಡೆ ಮಾಡುವ ಮೂಲಕ ಅಂಚೆ ಇಲಾಖೆ ಅದರ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀಪುರಂ ಅಂಚೆ ಕಚೇರಿಯ ಪ್ರಭಾರ ಅಂಚೆಪಾಲಕರಾದ ಬಿ.ಮಹದೇವಸ್ವಾಮಿ ಹಾಜರಿದ್ದರು. ನಿವೇದಿತಾ ಅವರ ಪ್ರಾರ್ಥನೆಯಿಂದ ಆರಂಭವಾದ ಕಾರ್ಯಕ್ರಮಕ್ಕೆ ಮಾರುಕಟ್ಟೆ ವ್ಯವಸ್ಥಾಪಕ ಡಾ. ಅಮ್ಮಸಂದ್ರ ಸುರೇಶ್ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು, ರೇಣುಕಾ ವಂದನಾರ್ಪಣೆ ಸಲ್ಲಿಸಿದರು.

Key words: release Permanent Pictorial cancellation, Clock Tower, Mysore

The post ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...