25
August, 2026

A News 365Times Venture

25
Tuesday
August, 2026

A News 365Times Venture

ನಂದಿನಿ ಬ್ರ್ಯಾಂಡ್ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದಂತಿದೆ- ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಜೂನ್,18,2025 (www.justkannada.in): ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ನಂದಿನಿ ಬ್ರ್ಯಾಂಡ್ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಆರ್.ಅಶೋಕ್, ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿತ್ತು.

ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಡೈರಿ ಮಳಿಗೆಗಳನ್ನು ಸ್ಥಾಪಿಸಲು ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಲೂ ಆಸಕ್ತಿ ತೋರಿಲ್ಲ. ನಮ್ಮ ನಾಡಿನ ರೈತರು, ನಿಷ್ಠಾವಂತ ಗ್ರಾಹಕರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಅನ್ನ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಶಪಥ ಮಾಡಿದಂತಿದೆ ಎಂದು ಆರ್.ಅಶೋಕ್ ಹರಿಹಾಯ್ದಿದ್ದಾರೆ.vtu

Key words: CM Siddaramaiah, destroy, Nandini brand, R. Ashok

The post ನಂದಿನಿ ಬ್ರ್ಯಾಂಡ್ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದಂತಿದೆ- ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...