ಬೆಂಗಳೂರು,ಮೇ,30,2025 (www.justkannada.in): ತಮಿಳಿನಿಂದ ಕನ್ನಡ ಹುಟ್ಟಿತು ಎಂದು ಹೇಳಿಕೆ ನೀಡಿ ಕನ್ನಡಕ್ಕೆ ಅಪಮಾನ ಮಾಡಿರುವ ನಟ ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಿದ್ರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣಗೌಡ, ಯಾವುದಾದರೂ ಚಿತ್ರಮಂದಿರಗಳು ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆ. ಕಮಲ್ ಹಾಸನ್ ಅವರು ಕ್ಷಮೆ ಕೇಳದೇ ಇದ್ದರೆ ಅವರ ಯಾವ ಸಿನಿಮಾಗಳೂ ಸಹ ಕರ್ನಾಟಕದಲ್ಲಿ ಬಿಡುಗಡೆ ಆಗಲು ಬಿಡುವುದಿಲ್ಲ. ಕನ್ನಡದ ಬಗ್ಗೆ ಯಾರೇ ಮಾತಾಡಿದರೂ ಕನ್ನಡ ರಕ್ಷಣಾ ವೇದಿಕೆ ಮಾತ್ರ ಬಿಡಲ್ಲ. ನಮ್ಮ ಮೇಲೆ ಇನ್ನೂ ಕೇಸ್ ಹಾಕಿದರೂ ಸಮಸ್ಯೆ ಇಲ್ಲ. ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ದರೆ ಅವರ ಸಿನಿಮಾ ಬಿಡುಗಡೆ ಆಗಲ್ಲ ಎಂದು ಹೇಳಿದ್ದಾರೆ.
ಕಮಲ್ ಹಾಸನ್ ತಮಿಳಿನ ದೊಡ್ಡ ಮಹಾ ನಟ. ಅವರ ಮೇಲೆ ದೊಡ್ಡ ಅಭಿಮಾನ ನಮಗೂ ಇತ್ತು. ಆದರೆ ಮೊನ್ನೆ ಸಿನಿಮಾ ಕಾರ್ಯಾಕ್ರಮದಲ್ಲಿ ಕನ್ನಡ ವಿರೋಧಿ ಹೇಳಿಕೆ ಕೊಟ್ಟಿದ್ದಾರೆ. ಅವರು ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿದ್ದಾರೆ. ಯಾವ ಆಧಾರದ ಮೇಲೆ ಹೇಳಿದ್ದಾರೊ ಗೊತ್ತಿಲ್ಲ. ಯಾವ ಶಾಸನಗಳನ್ನು ನೋಡದೆ ತಮಿಳರನ್ನ ಓಲೈಸುವ ಹೇಳಿಕೆ ಕೊಟ್ಟಿದ್ದಾರೆ. ಅವರು ಆ ಮಾತನ್ನ ಹೇಳುವಾಗ ಅಲ್ಲಿ ಶಿವರಾಜ್ ಕುಮಾರ್ ಇದ್ದರು. ಅವರು ಅಲ್ಲಿಯೆ ಇದಕ್ಕೆ ವಿರೋಧಿಸಬೇಕಿತ್ತು ಎಂದು ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದರು.
Key words: actor, Kamal Haasan, movie, Karave, Narayana Gowda
The post ನಟ ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಿದ್ರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.