26
August, 2026

A News 365Times Venture

26
Wednesday
August, 2026

A News 365Times Venture

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

Date:

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ  ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.

ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ಹೈಕೋರ್ಟ್ ನಟ ದರ್ಶನ್ ಗೆ ಜಾಮೀನು ಮಂಜೂರು ಮಾಡಿತ್ತು. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು.   ರಾಜ್ಯ ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್  ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದಿದ್ದರು.

Key words: Hearing, actor, Darshan, bail cancellation, petition, adjourned, Supreme court

The post ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ...