8
July, 2025

A News 365Times Venture

8
Tuesday
July, 2025

A News 365Times Venture

ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ: ಶ್ಲಾಘಿಸಿದ ಶಾಸಕ ಎಸ್.ಟಿ. ಸೋಮಶೇಖರ್

Date:

ಬೆಂಗಳೂರು,ಫೆಬ್ರವರಿ,7,2025 (www.justkannada.in): ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ.

ವಿಧಾನಸೌದದಲ್ಲಿ ಫೆಬ್ರವರಿ 6ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 , 6, 7ರಲ್ಲಿ ಆಂತರಿಕ ರಸ್ತೆಗಳ ಡಾಂಬರೀಕರಣವು ಬಹುತೇಕ ಪೂರ್ಣಗೊಂಡಿದೆ. ನಿವೇಶನದಾರರು ಮನೆ ನಿರ್ಮಾಣ ಮಾಡಲು ಮುಂದಾಗುತ್ತಿಲ್ಲ ಆದರೂ ಪ್ರಾಧಿಕಾರದಲ್ಲಿ ಉಳಿದ ಬ್ಲಾಕ್ ಗಳಲ್ಲಿ ಸುಮಾರು ಅಂದಾಜು ಮೊತ್ತ ರೂ 200. ಕೋಟಿಗೆ ಬಡಾವಣೆಯ ಆಂತರಿಕ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಮುಂದಾಗಿದೆ ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಬಡಾವಣೆಯ ನಿವೇಶನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಟ್ಟಡಗಳು ಬರಬೇಕೆಂದು ಹಾಗೂ ಕೆಂಪೇಗೌಡ ಬಡಾವಣೆಯು ನನ್ನ ಮತ ಕ್ಷೇತ್ರದಲ್ಲಿರುವ ಬಡಾವಣೆಯಾಗಿದ್ದು ಯಾವುದೇ ಕುಂದುಕೊರತೆಗಳಿದ್ದರೇ ಇಲಾಖೆಯವರಿಂದ ಪರಿಹರಿಸುವುದಾಗಿ ತಿಳಿಸಿದ ಶಾಸಕ ಎಸ್.ಟಿ. ಸೋಮಶೇಖರ್ ಅವರು

ಪ್ರಾಧಿಕಾರದವರು ಸಮಿತಿಯ ಸಭೆಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆಗಿರುವ ಪ್ರಗತಿಯ ವಿವರವನ್ನು ಮುಂದಿನ ಸಭೆಗೆ ಸಲ್ಲಿಸಿ, ಈ ಅರ್ಜಿಯನ್ನು ಅಂತಿಮಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರಲ್ಲಿ ಕೋರಿದರು.

ಒಟ್ಟಾರೆಯಾಗಿ ಬಡಾವಣೆಯ ಕೆಲಸ ಹಾಗೂ ಎಂ.ಎ.ಆರ್ ರಸ್ತೆಯ ಕೆಲಸದಲ್ಲಿ ಪ್ರಗತಿಯಾಗಿದೆಯೆಂದು ತಿಳಿಸಿದರು. ಈ ಮಧ್ಯೆ ಶಾಸಕರಾದ ಸುರೇಶ್ ಕುಮಾರ್ ರವರು ಮಾತನಾಡುತ್ತಾ, ಸದರಿ ಬಡಾವಣೆಯಲ್ಲಿ ರಸ್ತೆ ಅಗೆಯದಂತೆ, ಕುಡಿಯುವ ನೀರಿನ ಸಂಪರ್ಕಕ್ಕಾಗಿ ಪ್ರಾಧಿಕಾರವು ನಿವೇಶನದಾರರಿಂದ ಪಡೆಯುತ್ತಿರುವ ಮೊತ್ತವು ಅಧಿಕವಾಗಿದ್ದು, ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಶಾಸಕರಾದ ಯು.ಬಿ. ಬಣಕಾರ್, ಸಿ.ಎನ್.ಬಾಲಕೃಷ್ಣ, ಮಂಥರ್ ಗೌಡ, ಡಾ.ಅವಿನಾಶ್‌ ಜಾಧವ್, ಎಚ್.ಡಿ.ತಮ್ಮಯ್ಯ ಹಾಗೂ ಇತರರು ಇದ್ದರು.

Key words: Nadaprabhu Kempegowda, Layout, work, MLA S.T. Somashekar

The post ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ: ಶ್ಲಾಘಿಸಿದ ಶಾಸಕ ಎಸ್.ಟಿ. ಸೋಮಶೇಖರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...