4
March, 2026

A News 365Times Venture

4
Wednesday
March, 2026

A News 365Times Venture

ನಾಳೆ ಯುಗಾದಿ ಹಬ್ಬದ ಸಂಭ್ರಮ: ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ

Date:

ಬೆಂಗಳೂರು, ಮಾರ್ಚ್​ 29,2025 (www.justkannada.in):  ನಾಳೆ ಯುಗಾದಿ ಹಬ್ಬದ ಸಂಭ್ರಮವಾಗಿದ್ದು, ರಾಜ್ಯಾದ್ಯಂತ ಖರೀದಿ ಭರಾಟೆ ಜೋರಾಗಿದೆ. ಈ ಮಧ್ಯೆಯೇ  ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಹೂ, ಹಣ್ಣುಗಳ ಬೆಲೆ ಏರಿಕೆಯಾಗಿದೆ.  ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಹೂವು, ಹಣ್ಣು-ಹಂಪಲು, ತರಕಾರಿಯ ಬೇಡಿಕೆ ಹೆಚ್ಚಾಗಿದ್ದು, ಹಣ್ಣುಗಳ ಬೆಲೆ ಕೊಂಚ ದುಬಾರಿಯಾಗಿದೆ.  ಹೂವುಗಳ ದರ ಗಗನಕ್ಕೇರಿದೆ. ಇನ್ನು ತರಕಾರಿ ದರ ಯಥಾಸ್ಥಿತಿ ಇದೆ. ಬೆಲೆ ಏರಿಕೆಯಾದರೂ ಸಹ ಗ್ರಾಹಕರು  ಖರೀದಿಯಲ್ಲಿ ತೊಡಗಿದ್ದಾರೆ.

ಹೂವುಗಳ ಬೆಲೆಗಳನ್ನ ನೋಡುವುದಾದರೇ  ಕೆಜಿಗೆ 600 ರೂ ಇದ್ದ ಮಲ್ಲಿಗೆ 1200 ರೂಗೆ ತಲುಪಿದೆ. ಕನಕಾಂಬರ 600 ರೂ.ನಿಂದ 1000ರೂ.ಗೆ ಏರಿಕೆಯಾಗಿದೆ. ಗುಲಾಬಿ 100ರೂ. ನಿಂದ 300 ರೂ. ಗೆ, ಸಂಪಿಗೆ 200 ರೂ.ನಿಂದ 400  ರೂ.ಗೆ ಏರಕೆಯಾಗಿದೆ. ಹಾಗೆಯೇ ಸೇವಂತಿಗೆ 200 ರೂ. ನಿಂದ 360 ರೂ.ಗೆ , ಚೆಂಡು ಹೂವು       10 ರೂ.ನಿಂದ 40 ರೂಗೆ ಏರಿಕೆಯಾಗಿದೆ.

ಹಣ್ಣುಗಳ ಬೆಲೆ ನೋಡುವುದಾದರೇ  ಕೆಜಿ ಸೇಬಿನಹಣ್ಣಿಗೆ  200ರೂ. ನಿಂದ 240 ಏರಿಕೆಯಾದರೇ, ದಾಳಿಂಬೆ 150 ರೂ.ನಿಂದ 250 ರೂ.ಗೆ ಹೆಚ್ಚಳವಾಗಿದೆ. ಕಿತ್ತಳೆ 100 ರೂ.ನಿಂದ 120 ರೂ.ಗೆ, ದ್ರಾಕ್ಷಿ 80ರೂ.ನಿಂದ 120 ರೂ.ಗೆ , ಮಾವು150ರೂ.ನಿಂದ 200 ರೂ.ಗೆ, ಬಾಳೆ ಹಣ್ಣು 80ರೂ.ನಿಂದ 100 ರೂ.ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Ugadi festival, tomorrow,  Prices, flowers, fruits

The post ನಾಳೆ ಯುಗಾದಿ ಹಬ್ಬದ ಸಂಭ್ರಮ: ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...