12
July, 2025

A News 365Times Venture

12
Saturday
July, 2025

A News 365Times Venture

ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ, ಮಗಳು ಪತ್ತೆ: ಪತಿ ವಿರುದ್ದ ಕೊಲೆ ಆರೋಪ…?

Date:

ಮೈಸೂರು,ಜೂನ್,10,2025 (www.justkannada.in): ಗೃಹಿಣಿ ಹಾಗೂ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತಪಟ್ಟವರು. ಇಬ್ಬರ ಸಾವಿಗೆ ಪತಿ ಗಂಡನೇ ಹೊಣೆ ಎಂದು ಗ್ರಾಮಸ್ಥರು ಕೊಲೆ ಆರೋಪ ಹೊರೆಸಿದ್ದಾರೆ. ಮದುವೆ ಆಗಿ 22 ವರ್ಷವಾದರೂ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.

ಕೊಲೆ ಆರೋಪ ಹೊತ್ತ ಪತಿ ಜಯರಾಮು ಘಟನೆ ಬೆಳಕಿಗೆ ಬಂದ ಸಂದರ್ಭದಲ್ಲಿ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿ ನಂತರ ಪ್ರತ್ಯಕ್ಷವಾಗಿದ್ದಾನೆ. 22 ವರ್ಷಗಳ ಹಿಂದೆ ಮಹದೇವಮ್ಮಳನ್ನ ಮದುವೆ ಆಗಿದ್ದ ಕೊತ್ತನಹಳ್ಳಿ ಜಯರಾಮ ದಂಪತಿಗೆ ಸುಪ್ರಿಯ ಎಂಬ ಮಗಳಿದ್ದಾಳೆ. ವರ್ಷಗಳು ಉರುಳಿದರೂ ಜಯರಾಮುಗೆ ವರದಕ್ಷಿಣೆ ದಾಹ ಕಡಿಮೆ ಆಗಿರಲಿಲ್ಲ. ಈ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡುತ್ತಲೇ ಇದ್ದ. ಇದರಿಂದ ಮಗಳು ಸುಪ್ರಿಯ ಸಹ ನೊಂದಿದ್ದಳು. ಗಂಡನ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದರೆಂದು ಹೇಳಲಾಗಿದೆ.  ಪೊಲೀಸರಿಂದಾಗಲಿ ಅಥವಾ ಕುಟುಂಬಸ್ಥರಿಂದ ಮಹದೇವಮ್ಮ ಗೆ ನ್ಯಾಯ ದೊರೆತಿಲ್ಲವೆಂದು ತವರು ಮನೆಯ ಸಂಬಂಧಿಕರು ಆರೋಪಿಸಿದ್ದಾರೆ.

ಗಂಡನ ವರದಕ್ಷಿಣೆ ದಾಹಕ್ಕೆ ಬೇಸತ್ತಿದ್ದ ಮಹದೇವಮ್ಮ ಹಾಗೂ ಮಗಳು ಮನೆಯ ತಂಬಾಕು ಬೇಯಿಸುವ ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಇಬ್ಬರ ಸಾವಿಗೆ ಗಂಡ ಜಯರಾಮು ಕಾರಣ ಎಂದು  ಮೃತ ಮಹಿಳೆ ಮಹದೇವಮ್ಮ ತವರು ಮನೆಯ ಸಂಬಂಧಿಕರು ಆರೋಪಿಸಿದ್ದಾರೆ.vtu

Key words: Mysore, Wife, daughter, found, hanging:, Husband, murder

The post ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ, ಮಗಳು ಪತ್ತೆ: ಪತಿ ವಿರುದ್ದ ಕೊಲೆ ಆರೋಪ…? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...