8
July, 2025

A News 365Times Venture

8
Tuesday
July, 2025

A News 365Times Venture

ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ

Date:

ಮೈಸೂರು,ಏಪ್ರಿಲ್,19,2025 (www.justkannada.in): ಅಂತಾರಾಷ್ಟ್ರೀಯ ಖ್ಯಾತಿಯ ಪಿಟೀಲು ವಾದಕ ಡಾ. ಮೈಸೂರು ಮಂಜುನಾಥ್ ಅವರ ಪುತ್ರಿ,  ಉದಯೋನ್ಮುಖ ಪಿಟೀಲು ವಾದಕಿ ಮಾಳವಿ ಮಂಜುನಾಥ್ ಅವರ ಪಿಟೀಲು ವಾದನ ಕಾರ್ಯಕ್ರಮವು  ನೇಪಾಳದ ಕಠ್ಮಂಡುವಿನಲ್ಲಿರುವ ತ್ರಿಭುವನ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಏಪ್ರಿಲ್ 22 ರಂದು ನಡೆಯಲಿದೆ.

ತ್ರಿಭುವನ ವಿಶ್ವವಿದ್ಯಾನಿಲಯದ ಆಹ್ವಾನದ ಮೇರೆಗೆ ಮಾಳವಿ ಮಂಜುನಾಥ್ ಅವರು ಈ ಕಾರ್ಯಕ್ರಮ ನಡೆಸಿಕೊಡುವರು. ನೇಪಾಳದಲ್ಲಿ ಅವರು ಅತುಲ್ ಸ್ಮೃತಿ ಗುರುಕುಲ ಅಕಾಡೆಮಿ ಆಹ್ವಾನದ ಮೇರೆಗೆ ಪೋಖಾರದಲ್ಲಿಯೂ ಪಿಟೀಲು ವಾದನ ಕಛೇರಿಯನ್ನು ನಡೆಸಿಕೊಡುವರು.

ಮಾಳವಿ ಮಂಜುನಾಥ್ ಅವರು ಕಳೆದ ಜನವರಿಯಲ್ಲಿ ಶ್ರೀಲಂಕಾದ ಭಾರತೀಯ ರಾಯಭಾರಿ ಕಚೇರಿಯ ಆಹ್ವಾನದ ಮೇರೆಗೆ ಪ್ರತಿಷ್ಠಿತ ಜಾಫ್ನಾ ಸಾಂಸ್ಕೃತಿಕ ಕೇಂದ್ರ, ಬಟ್ಟಿಕಲೋವಾದ ಈಸ್ಟ್ರನ್ ವಿಶ್ವವಿದ್ಯಾನಿಲಯದಲ್ಲಿ ಪಿಟೀಲು ವಾದನ ಕಛೇರಿಯನ್ನು ನಡೆಸಿಕೊಟ್ಟಿದ್ದಾರೆ.

ಮಾಳವಿ ಮಂಜುನಾಥ್  ಅವರು ಬಾಲ್ಯದಿಂದಲೇ  ಕರ್ನಾಟಕ ಸಂಗೀತವನ್ನು ಕಲಿತವರು. ಮಾಳವಿ ಅವರು ತಮ್ಮ ತಾತ ವಿದ್ವಾನ್ ಎಸ್.ಮಹದೇವಪ್ಪ ಮತ್ತು ತಂದೆ ಡಾ.ಮೈಸೂರು ಮಂಜುನಾಥ್ ಅವರಿಂದ ತರಬೇತಿ ಪಡೆದವರು. ಮಾಳವಿ ಅವರು ಕರ್ನಾಟಕ ಹಾಗೂ ದೇಶದ ಇತರ ಭಾಗಗಳಲ್ಲಿ ಈಗಾಗಲೇ ಪಿಟೀಲು ವಾದನದ ಕಛೇರಿಯನ್ನು ನಡೆಸಿಕೊಟ್ಟಿದ್ದಾರೆ.

ಮಾಳವಿ ಮಂಜುನಾಥ್ ಅವರು ಮೈಸೂರಿನ ವಿಜಯವಿಠ್ಠಲ ಶಾಲೆಯಲ್ಲಿ ಓದಿದವರು. ಅವರು ಅನೇಕ ಪ್ರಶಸ್ತಿಗಳ ಪುರಸ್ಕೃತರು.

Key words: Violin, performance, Malavi Manjunath, 22nd April, Nepal

The post ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...