15
July, 2025

A News 365Times Venture

15
Tuesday
July, 2025

A News 365Times Venture

ಪಂಚ ಗ್ಯಾರಂಟಿ ಯಶಸ್ವಿ ಹಿನ್ನೆಲೆ: ಮೇ 20 ರಂದು ಬೃಹತ್ ಸಾಧನಾ ಸಮಾವೇಶ- ಪುಷ್ಪಾ ಅಮರನಾಥ್.

Date:

ಮೈಸೂರು,ಮೇ,16,2025 (www.justkannada.in): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಯಶಸ್ವಿ ಹಿನ್ನಲೆ, ಇದೇ ತಿಂಗಳ ಮೇ 20 ರಂದು ಗ್ಯಾರಂಟಿ ಯೋಜನೆಗಳ ಬಿಂಬಿಸುವ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.

ಇಂದು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ ಡಾ.ಪುಷ್ಪಾ ಅಮರನಾಥ್, ಸರ್ಕಾರದಿಂದಲೇ ವಿಜಯಪುರ ಜಿಲ್ಲೆ ಹೊಸಪೇಟೆಯಲ್ಲಿ ಇದೇ ತಿಂಗಳ ಮೇ.20 ರಂದು ಸಾಧನಾ ಸಮಾವೇಶ ನಡೆಯಲಿದೆ. ರಾಜ್ಯಾದ್ಯಂತ ಈ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಆಗಮಿಸಲಿದ್ದಾರೆ. ಮೈಸೂರು ವ್ಯಾಪ್ತಿಗೆ ಬರುವ ಎಂಟು ಜಿಲ್ಲೆಗಳ ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಸಮಾವೇಶಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಕರ್ನಾಟಕ ಜಿಡಿಪಿಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಇದಕ್ಕೆ ಮೂಲ ಕಾರಣ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಲ್ಲಿ ಕೊಟ್ಟಂತಹ ಜನಪರ ಕಾರ್ಯಕ್ರಮಗಳು ಅಪಾರ ಯಶಸ್ಸನ್ನ ಗಳಿಸಿವೆ. ನಮ್ಮ ಸರ್ಕಾರ ಮಾಡಿದಂತಹ ಉತ್ತಮ ಕೆಲಸವನ್ನ ಜನರಿಗೆ ತಿಳಿಸುವ ಸದುದ್ದೇಶದಿಂದ ಸಾಧನ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ ಎಂದು  ಪುಷ್ಪಾ ಅಮರನಾಥ್ ತಿಳಿಸಿದರು.

Key words:  Guarantee Scheme, Success, Sadhana Conference, Pushpa Amarnath.

The post ಪಂಚ ಗ್ಯಾರಂಟಿ ಯಶಸ್ವಿ ಹಿನ್ನೆಲೆ: ಮೇ 20 ರಂದು ಬೃಹತ್ ಸಾಧನಾ ಸಮಾವೇಶ- ಪುಷ್ಪಾ ಅಮರನಾಥ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...