16
April, 2026

A News 365Times Venture

16
Thursday
April, 2026

A News 365Times Venture

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಮೈಸೂರು,ಏಪ್ರಿಲ್,30,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಳೆದ ಏಳು ವರ್ಷಗಳ ಹಿಂದ ಅಬ್ಬಳತಿ ಗ್ರಾಮದ ಸೌಮ್ಯ ಎಂಬಾಕೆಯನ್ನು ಸ್ವಾಮಿ ನಾಯಕ ವಿವಾಹವಾಗಿದ್ದನು. ಈ ನಡುವೆ 2022 ಮೇ 9 ರಂದು ಪತ್ನಿ ಸೌಮ್ಯ  ಮುಖಕ್ಕೆ ತಲೆ ದಿಂಬು ಹಾಕಿ ಉಸಿರುಗಟ್ಟಿಸಿ ಸ್ವಾಮಿನಾಯಕ ಕೊಲೆ ಮಾಡಿದ್ದನು.

ಪ್ರಕರಣ ವಿಚಾರಣೆ ನಡೆಸಿದ 5 ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕನವರ್, ಸಾಕ್ಷ್ಯಾಧಾರಗಳ ಮೂಲಕ ಕೊಲೆ ಮಾಡಿರುವುದು ದೃಢ ಪಟ್ಟ ಹಿನ್ನಲೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಅಭಿಯೋಜಕ ಯೋಗೇಶ್ವರ್ ವಾದ ಮಂಡಿಸಿದ್ದರು.

Key words: Life sentence, husband, murdered, wife, Mysore court

The post ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...