16
July, 2025

A News 365Times Venture

16
Wednesday
July, 2025

A News 365Times Venture

ಪಹಲ್ಗಾಮ್ ಉಗ್ರರ ದಾಳಿ: ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ- ಹೆಚ್ ಡಿ ದೇವೇಗೌಡರು

Date:

ಬೆಂಗಳೂರು,ಏಪ್ರಿಲ್,29,2025 (www.justkannada.in):  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಣಯಗಳಿಗೆ ಬೆಂಬಲವಿದೆ. ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಹೆಚ್.ಡಿ ದೇವೇಗೌಡರು, ಪ್ರವಾಸಿಗರ ಮೇಲೆ ಭಯೋತ್ಪಾದಕರು  ದೌರ್ಜನ್ಯ ಮಾಡಿದ್ದಾರೆ.  ಪಾಕ್ ಬೆಂಬಲದಿಂದ ಕೃತ್ಯವೆಸಗಿದ್ದಾರೆ ಎಂಬ ಮಾಹಿತಿ ಕೇಂದ್ರದ ಬಳಿ ಇದೆ. ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ದೇಶದ ಜನತೆ ಬೆಂಬಲ ಕೊಡುತ್ತೇವೆ. ಎನ್ ಡಿ ಮೈತ್ರಿಕೂಟದಲ್ಲಿ ಹೆಚ್ ಡಿಕೆ ಮಂತ್ರಿಗಳಾಗಿದ್ದಾರೆ.  ಅದ್ದರಿಂದ ನಾವು ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದರು.

ಇನ್ನು ಪತ್ರದ ಮೂಲಕ ನನ್ನ ಅಭಿಪ್ರಾಯ ತಿಳಿಸುತ್ತೇನೆ. ನನ್ನ ರಾಜಕೀಯ ಕೊನೇ ಘಟ್ಟದಲ್ಲಿ ನಾನು ತೀರ್ಮಾನ ಮಾಡಿದ್ದೇನೆ ಮೋದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ ವಿಶ್ವದ ಅನೇಕ ರಾಷ್ಟ್ರಗಳ ನಾಯಕರು ಘಟನೆ ಖಂಡಿಸಿದ್ದಾರೆ  ಮುಂದೆ ಏನು ಆಗಬಹುದು ಎಂದು ನಾನು ಈಗಲೇ ಹೇಳಲು ಆಗಲ್ಲ  ಮೋದಿ ತೆಗೆದುಕೊಳ್ಳುವ ನಿರ್ಧಾರವನ್ನ ಎಲ್ಲರೂ ಬೆಂಬಲಿಸಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

ಪಿಎಂ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಗಟ್ಟು ಪ್ರದರ್ಶಿಸಿ  ಬೆಂಬಲಿಸಬೇಕು. ಖರ್ಗೆ ಅವರು ಮೋದಿ ನಿರ್ಧಾರ ಬೆಂಬಲಿಸಬಹುದು.  ನಾನು ನಮ್ಮ ಪಕ್ಷ  ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ  ಖರ್ಗೆ ಮಾತಿಗೆ ಹೆಚ್ಚು ಬೆಲೆ ಇದೆ. ಆದ್ದರಿಂದ ನಾನು ಹೆಚ್ಚು ಮಾತನಾಡಲ್ಲ ಎಂದರು.

Key words: Pahalgam, terror attack,  PM Modi, decision, HD Deve Gowda

The post ಪಹಲ್ಗಾಮ್ ಉಗ್ರರ ದಾಳಿ: ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ- ಹೆಚ್ ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...