12
August, 2026

A News 365Times Venture

12
Wednesday
August, 2026

A News 365Times Venture

ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​

Date:

ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ  ಗಾಯಕ ಸೋನು ನಿಗಮ್​  ಇಂದು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ  ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್​ ನಿಗಮ್​ ಗಾಯನ ಮಾಡುತ್ತಿದ್ದ ವೇಳೆ ಕನ್ನಡ ಹಾಡು ಹೇಳಿಎಂದಿದ್ದಕ್ಕೆ ಸೋನು ನಿಗಮ್​ ಏಕಾಏಕಿ ಗರಂ ಆಗಿ ‘ಕನ್ನಡ.. ಕನ್ನಡ.. ಇದೇ ಕಾರಣ  ಪಹಲ್ಗಾಮ್‌ನಲ್ಲಿ ಆಗಿರುವುದಕ್ಕೆ ಎಂದಿದ್ದರು.  ಈ ಸಂಬಂಧ  ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಸೋನು ನಿಗಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿಕೆ ಮಾಡಿದೆ.

Key words:  Pahalgam attack, Kannada, Sonu Nigam, High Court, FIR

The post ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ...

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...