4
March, 2026

A News 365Times Venture

4
Wednesday
March, 2026

A News 365Times Venture

ಪಾಕ್‌ ಪರ ಘೋಷಣೆ ಕೂಗಿದ್ದ ಟೆಕ್ಕಿಯ ಬಂಧನ

Date:

ಬೆಂಗಳೂರು, ಮೇ 14,2025 (www.justkannada.in):  ಆಪರೇಷನ್‌ ಸಿಂಧೂರ್‌ ಯಶಸ್ಸಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಟೆಕ್ಕಿಯನ್ನು ಬೆಂಗಳೂರಿನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್‌ ಲೇಔಟ್‌ ನ ಪಿಜಿವೊಂದರಲ್ಲಿ ನೆಲೆಸಿದ್ದ ಛತ್ತೀಸ್‌‍ಗಡ ಮೂಲದ ಶುಭಾಂಶು ಶುಕ್ಲಾ (25) ಬಂಧಿತ ಟೆಕ್ಕಿ. ಈತ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು,  ಕಟ್ಟಡದ ಬಾಲ್ಕನಿಯಲ್ಲಿ ನಿಂತುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಎನ್ನಲಾಗಿದೆ.

ಪಿಜಿಯ ಕೊಠಡಿಯೊಂದರಲ್ಲಿ ಶುಭಾಂಶು ಶುಕ್ಲಾ ತನ್ನ ಸ್ನೇಹಿತನ ಜೊತೆ ವಾಸವಾಗಿದ್ದು, ಮೇ 9 ರಂದು ಮಧ್ಯರಾತ್ರಿ 12.30ರ ವೇಳೆಯಲ್ಲಿ ಪಿಜಿಯಲ್ಲಿದ್ದ ಹಲವು ಯುವಕರು ಸೇರಿಕೊಂಡು ಆಪರೇಷನ್‌ ಸಿಂಧೂರ್‌ ಯಶಸ್ಸಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ಸಮಯದಲ್ಲಿ ಬಾಲ್ಕನಿಯಲ್ಲಿ ನಿಂತು ಶುಭಾಂಶು ಶುಕ್ಲಾ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.

ಸಂಭ್ರಮಾಚರಣೆಯಲ್ಲಿದ್ದ ಯುವಕರು ತಕ್ಷಣ ಕಂಟ್ರೋಲ್‌ ರೂಂಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಶುಭಾಂಶು ಶುಕ್ಲಾನನ್ನು ವಶಕ್ಕೆ ಪಡೆದಿದ್ದಾರೆ.

Key words: Techie, arrested ,shouting, pro-Pakistan, slogans

The post ಪಾಕ್‌ ಪರ ಘೋಷಣೆ ಕೂಗಿದ್ದ ಟೆಕ್ಕಿಯ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...